
ಮಂಗಳೂರು, ಮಾರ್ಚ್ 17: ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ ಕರ್ಮಕಾಂಡ ಈಗ ಬಯಲಾಗಿದೆ. ಮಂಗಳೂರು (ಮಂಗಳೂರು) ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ (ಮೂಡಬಿದ್ರಿ ಇನ್ಸ್ಪೆಕ್ಟರ್) ಸಂದೇಶ್ ಪಿಜಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳು ಇಡೀ ಪೊಲೀಸರನ್ನೇ ತಲೆತಗ್ಗಿಸುವಂತೆ ಮಾಡಿದೆ.
ಏನಿದು ಮೂಡಬಿದ್ರೆ ಇನ್ಸ್ ಪೆಕ್ಟರ್ ಕಾಮಕಾಂಡ ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಇನ್ ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಗಂಭೀರ ಕಿರುಕುಳ ಹಾಗೂ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಕೌಟುಂಬಿಕ ವ್ಯಾಜ್ಯ ಅಥವಾ ದೂರು ನೀಡಲು ಈ ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದೆ. ಸಂತ್ರಸ್ತೆ ಒಬ್ಬಳ ಗಂಡನನ್ನು ಕೇಸ್ನಲ್ಲಿ ಸಿಲುಕಿಸಿ, ಆತನನ್ನು ಬಿಡುಗಡೆಗೊಳಿಸಿದಾಗ ‘ನನ್ನ ಜೊತೆ ಮಲಗಬೇಕು ಅಥವಾ 25 ಲಕ್ಷ ರೂಪಾಯಿ ನೀಡಲಾಗಿದೆ’ ಎಂದು ಇನ್ಸ್ ಪೆಕ್ಟರ್ ಧಮಕಿ ಹಾಕಿರುವ ವಿಷಯ ಈಗ ಬೆಳಕಿಗೆ ಬಂದಿದೆ. ‘ನಾನು ಪೋಸ್ಟಿಂಗ್ಗಾಗಿ ಗೃಹಸಚಿವರಿಗೆ 50 ಲಕ್ಷ ನೀಡಿದ್ದೇನೆ’ ಎಂದು ಈತ ಅಹಂಕಾರದಿಂದ ಹೇಳಿಕೊಂಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಮತ್ತೊಂದು ಪ್ರಕರಣದ ಸಂತ್ರಸ್ತೆ ಮಗಳ ಮೇಲೂ ಕಣ್ಣು: ಆಡಿಯೋ ವೈರಲ್
ಈ ಪ್ರಕರಣದಲ್ಲಿ ಇನ್ನೊಂದು ಕರಾಳವಾದ ಅಂಶವೆಂದರೆ, ಈ ಇನ್ಸ್ಪೆಕ್ಟರ್ ತಾನು ಹೆಚ್ಚಾಗಿ ಬಳಸಿಕೊಂಡ ಮಹಿಳೆಯೊಬ್ಬರ ಅಪ್ರಾಪ್ತ ಮಗಳೂ ಕೆಟ್ಟದೃಷ್ಟಿ ಬೀರಿದ್ದಾರೆ. ಆಕೆ ಓದುತ್ತಿರುವ ಕಾಲೇಜಿಗೆ ಹೋಗುತ್ತೇನೆ ಎಂದು ಫೋನ್ನಲ್ಲಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ. ಈ ಆರೋಪಕ್ಕೆ ಸಂಬಂಧಿಸಿದ ಆಡಿಯೋವೊಂದು ಈಗ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕೊನೆಗೂ ಎಚ್ಚೆತ್ತ ಪೊಲೀಸ್ ಇಲಾಖೆ
ಕಳೆದ ಕೆಲವು ತಿಂಗಳುಗಳಿಂದ ಈತನ ವಿರುದ್ಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವಿತ್ತು. ಹಿರಿಯ ಅಧಿಕಾರಿಗಳೇ ಈತನನ್ನು ರಕ್ಷಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಇದೀಗ ಪ್ರಕರಣದ ತೀವ್ರತೆ ಅರಿತ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದಾರೆ. ಉತ್ತರ ವಿಭಾಗದ ಎಸ್ಸಿಪಿ ಶ್ರೀಕಾಂತ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ: ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್ ಪೆಕ್ಟರ್!
ಈವರೆಗೂ ಯಾವೊಬ್ಬ ಮಹಿಳೆಯೂ ಅಧಿಕೃತವಾಗಿ ಈ ಕಿರುಕುಳದ ಬಗ್ಗೆ ದೂರು ನೀಡಿಲ್ಲ. ಯಾರಾದರೂ ಸಂತ್ರಸ್ತರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಿಷನರ್ ಮನವಿ ಮಾಡಿದ್ದಾರೆ. ಆದರೆ ಮತ್ತೊಂದೆಡೆ, ಸಿಎಂ, ಗೃಹ ಸಚಿವರು ಮತ್ತು ಮಹಿಳಾ ಆಯೋಗಕ್ಕೆ ದೂರು ನೀಡಿದ್ದೇನೆ ಎಂದು ಸಂತ್ರಸ್ತ ಮಹಿಳೆ ಹೇಳಿದ್ದು, ನ್ಯಾಯ ಒದಗಿಸಿಕೊಡುವಂತೆ ಮನವಿ ಮಾಡಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ