
ಹೊಸದಿಲ್ಲಿ, ಮಾರ್ಚ್ 23: TV9 ನೆಟ್ವರ್ಕ್ನ “ಇಂಡಿಯಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026”WITT ಶೃಂಗಸಭೆ 2026) ಇಂದಿನಿಂದ ದೆಹಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಭಾರತ ಮತ್ತು ಜಗತ್ತು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಈ ಶೃಂಗಸಭೆಯಲ್ಲಿ ಅವರು ಸತತ ಮೂರನೇ ಬಾರಿ ಭಾಗವಹಿಸುತ್ತಿದ್ದಾರೆ. ಇಂದು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈ ಹೋಮ್ ಗ್ರೂಪ್ಸ್ ಚೇರ್ಮನ್ ರಾಮೇಶ್ವರ ರಾವ್ ಜೂಪಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು.
ನಾಳೆಯೂ ನಡೆಯುವ ಈ ಶೃಂಗಸಭೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ಉತ್ತರಾಖಂಡದ ಸಿಎಂ ಪುಷ್ಕರ್ ಧಾಮಿ, ರಾಜಸ್ಥಾನದ ಸಿಎಂ ಭಜನ್ಲಾಲ್ ಶರ್ಮಾ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್ ಭಾಗವಹಿಸಲಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಷಣ ಮಾಡಲಿದ್ದಾರೆ. ಲೋಕಸಭಾ ಸದಸ್ಯರಾದ ಅಖಿಲೇಶ್ ಯಾದವ್ ಮತ್ತು ಅಸಾದುದ್ದೀನ್ ಓವೈಸಿ ಕೂಡ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ