Headlines

ಯೂನಿಟಿ ಮಾಲ್ ನಿರ್ಮಾಣ ವಿವಾದ: ಪತ್ರಿಕಾ ಪ್ರಕಟಣೆ ಮೂಲಕ ಪ್ರಮೋದಾ ದೇವಿ ಸ್ಪಷ್ಟನೆ

ಯೂನಿಟಿ ಮಾಲ್ ನಿರ್ಮಾಣ ವಿವಾದ: ಪತ್ರಿಕಾ ಪ್ರಕಟಣೆ ಮೂಲಕ ಪ್ರಮೋದಾ ದೇವಿ ಸ್ಪಷ್ಟನೆ


ಮಾಲ್ ನಿರ್ಮಾಣಕ್ಕೆ ವಿರೋಧ.

ಮೈಸೂರು, ಡಿಸೆಂಬರ್ 12: ಮೈಸೂರಿನಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆಯಾಜ್ಞೆ ವಿಚಾರ ಸಂಬಂಧ ಮಾಧ್ಯಮ ಪ್ರಕಟಣೆಯ ಮೂಲಕ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ. ಮಾಲ್ ನಿರ್ಮಾಣಕ್ಕೆ ನನ್ನ ವಿರೋಧವಿಲ್ಲ, ಆದರೆ ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ.ಇದೇ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮೋದಾ ದೇವಿ ಹೇಳಿದ್ದೇನು?

ಪ್ರಮೋದಾ ದೇವಿ

ಪ್ರಕಟಣೆಯ ಮೂಲಕ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ

ಕಸಬಾ ಪ್ರದರ್ಶನ ಹೋಬಳಿಯ ಸರ್ವೆ ನಂ.1ರ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿಯಲ್ಲಿ ಮಾಲ್ ನಿರ್ಮಾಣದ ಬಗ್ಗೆ ಹೈಕಮಾಂಡ್ ಯಥಾಸ್ಥಿತಿ ಆದೇಶ ನೀಡಿದೆ, ಕರಕುಶಲವಸ್ತು, ಐಜಿಟ್ಯಾಗ್ ಮಾಡಲಾದ ಉತ್ಪನ್ನಕ್ಕೆ ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ, ಅದಕ್ಕೆ ವಿರೋಧವಿಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಅದರ ಬದಲು ಖಾಸಗಿ ಆಸ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ. ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು, ರಕ್ಷಣೆ ನನ್ನ ಜವಾಬ್ದಾರಿಯಾಗಿದೆ. ಅದೇ ಕೆಲಸವನ್ನು ನಾನು ಮಾಡಿದ್ದೇನೆ. ನನ್ನ ನಿಲುವನ್ನು ದೃಢೀಕರಿಸಲು ಸಂಬಂಧಿಸಿದ ದಾಖಲೆಯನ್ನು ಸಲ್ಲಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮೇಕ್ ಇನ್ ಇಂಡಿಯಾ ಸುಧಾರಿಸಲು ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದ ಯೂನಿಟಿ ಮಾಲ್ಗೆ ವಿಘ್ನ

ಪ್ರಕರಣ ಏನು?

ಸ್ಥಳೀಯವಾಗಿ ಉತ್ಪಾದನೆಯಾಗುವ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆಯ ಉತ್ಪನ್ನ ಕೇಂದ್ರ ಸರ್ಕಾರದ ಕೊಡುಗೆಯೊಂದಿಗೆ 6.5 ಯೂನಿಟಿ ಮಾಲ್ ನಿರ್ಮಾಣವನ್ನು ಒದಗಿಸಲಾಗಿದೆ ಕೆಲವು ತಿಂಗಳ ಹಿಂದಷ್ಟೇ ಪ್ರಾರಂಭವಾಯಿತು. ಕೇಂದ್ರ ಸರ್ಕಾರದ 193 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರ ಈ ಯುನಿಟಿ ಮಾಲ್ ನಿರ್ಮಾಣಕ್ಕೆ ಮುಂದಾಗಿತ್ತು. ಇದು ಕೇಂದ್ರದ ಯೋಜನೆಯಾದ ಕಾರಣ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೂಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ನಡುವೆ ಮಾಲ್ ನಿಮಾಅರ್ಣಕ್ಕೆ ಪ್ರಮೋದಾ ಒಡೆಯರ್ ತಡೆಯಾಜ್ಞೆ ತಂದಿರೋದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 4:34 pm, ಶುಕ್ರ, 12 ಡಿಸೆಂಬರ್ 25



Source link

Leave a Reply

Your email address will not be published. Required fields are marked *