ಬೆಂಗಳೂರು, ಜನವರಿ 06: ಬಹು ನಿರೀಕ್ಷಿತ ನಮ್ಮ ಮೆಟ್ರೋ ಆರೆಂಜ್ ಲೈನ್ ಕಾಮಗಾರಿಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆತಿದೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಕಳೆದಿದೆ. ನಮ್ಮ ಮೆಟ್ರೋದ ಮೂರನೇ ಪ್ರಾಜೆಕ್ಟ್ಗೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರೂ ಯೋಜನೆ ಮಾತ್ರ ಇನ್ನೂ ಪ್ರಾರಂಭವಾಗಿಲ್ಲ. 2024 ಆಗಸ್ಟ್ 16 ರಂದು ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಅದಾಗಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಕಳೆದರೂ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಈ ನಾಗರಿಕ ಕಾಮಗಾರಿಗಳಿಗಾಗಿ ಟೆಂಡರ್ಗಳನ್ನು ಆಹ್ವಾನಿಸಿಲ್ಲ.
ವಿಳಂಬಕ್ಕೆ ಕಾರಣ ಏನು?
ಒಟ್ಟು ಸುಮಾರು 44.65 ಕಿಮೀ ಉದ್ದದ ಎರಡು ಕಾರಿಡಾರ್ಗಳನ್ನು ಆರೆಂಜ್ ಲೈನ್ ಒಳಗೊಂಡಿದೆ. ಸಾರ್ವಜನಿಕ ಸಾರಿಗೆ ಸೌಲಭ್ಯಗಳ ಕೊರತೆಯಿರುವ ವಸತಿ ಪ್ರದೇಶಗಳು, ಕೈಗಾರಿಕಾ ವಲಯಗಳು ಮತ್ತು ಟಿ ಹಬ್ಗಳನ್ನು ಸಂಪರ್ಕಿಸುವ ಉದ್ದೇಶ ಈ ಯೋಜನೆಯಲ್ಲಿದೆ. ಪ್ರಾಜೆಕ್ಟ್ 1 ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ 32.15 ಕಿ.ಮೀ ಮತ್ತು ಪ್ರಾಜೆಕ್ಟ್ 2 ಹೊಸಹಳ್ಳಿಯಿಂದ ಕಡಬಗೆರೆಗೆ 12.5 ಕಿ.ಮೀ. ಸಂಪರ್ಕ ಕಲ್ಪಿಸಲಿದೆ. ರಾಜ್ಯ ಸರ್ಕಾರವು ಸಂಪೂರ್ಣ ಆರೆಂಜ್ ಲೈನ್ ಅನ್ನು ಡಬಲ್ ಡೆಕ್ಕರ್ ಕಾರಿಡಾರ್ ಆಗಿ ನಿರ್ಮಿಸುವ ಬಗ್ಗೆ ನಿರ್ಧಾರ ಕೈಗೊಂಡಿರುವುದೇ ಯೋಜನೆ ವಿಳಂಬಕ್ಕೆ ಪ್ರಮುಖವಾಗಿದೆ. ರಸ್ತೆ ಜಾಗವನ್ನು ಬಳಸುವ ಉದ್ದೇಶ ಈ ನಿರ್ಧಾರದ ಹಿಂದೆ ಇರುವ ಯೋಜನೆ ಮತ್ತು ವಿನ್ಯಾಸದಲ್ಲಿ ದೊಡ್ಡ ಬದಲಾವಣೆಯನ್ನು ಹೊಂದಿದೆ. ಈ ಒಂದೇ ನಿರ್ಧಾರದಿಂದಲೇ ಯೋಜನೆಗೆ ಸುಮಾರು 9,000 ಕೋಟಿ ರೂ. ಹೆಚ್ಚುವರಿ ಸೇರ್ಪಡೆಯಾಗಬಹುದು ಎಂದು ಅಧಿಕೃತ ವೆಚ್ಚ.
ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗುಡ್ನ್ಯೂಸ್
ನಮ್ಮ ಮೆಟ್ರೋ ಆರೆಂಜ್ ಲೈನ್ ಕುರಿತಾದ ಟೆಂಡರ್ಗಳು ಯಾವಾಗ ಹೊರಬರುತ್ತವೆ ಅಥವಾ ಕಾಮಗಾರಿ ಯಾವಾಗ ಆರಂಭವಾಗುತ್ತದೆ ಎಂಬುದಕ್ಕೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಯೋಜನೆಗೆ ಅನುಮೋದನೆ ಇದ್ದರೂ ಈವರೆಗೆ ಯಾವುದೇ ಪ್ರಗತಿ ಆಗಿಲ್ಲ. ಹೀಗಾಗಿ ಯೋಜನೆಗಳು ಏರುತ್ತಲೇ ಇರೋದು ಒಂದೆಡೆಯಾದರೆ, ಆರೆಂಜ್ ಲೈನ್ ಮೆಟ್ರೋ ಆರಂಭದಿಂದ ಟ್ರಾಫಿಕ್ ಸಮಸ್ಯೆ ಇಳಿಮುಖವಾಗಿ ಸುಗಮ ಸಂಚಾರದ ಕನಸು ಕಂಡಿದ್ದ ಪಶ್ಚಿಮ ಮತ್ತು ದಕ್ಷಿಣ ಬೆಂಗಳೂರಿನ ಪ್ರಯಾಣಿಕರು ತಾತ್ಕಾಲಿಕ ನಿರಾಸೆಗೆ ತುತ್ತಾಗುವ ಸ್ಥಿತಿ ಎದುರಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 10:30 am, ಮಂಗಳವಾರ, 6 ಜನವರಿ 26