
ಬೆಂಗಳೂರು, ಅಕ್ಟೋಬರ್ 23: ಬೆಂಗಳೂರಿನಿಂದ ಮುಂಬೈಗೆ ತೆರಳುವ ಪ್ರಯಾಣಿಕರಿಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಗುಡ್ ನ್ಯೂಸ್ ನೀಡಿದ್ದಾರೆ. ಬೆಂಗಳೂರಿನಿಂದ (ಬೆಂಗಳೂರು) ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಸಂಚರಿಸುತ್ತಿರುವ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಸಿಕ್ಕಿದ್ದು, ಈ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ, ಸಂಸದ ಪ್ರಹ್ಲಾದ್ ಜೋಶಿಯವರು ಅಕ್ಟೋಬರ್ 16, 2025 ರಂದು ಸಲ್ಲಿಸಿದ್ದ ಮನವಿಯನ್ನ ಉಲ್ಲೇಖಿಸಿ ಈ ಬಗ್ಗೆ ಘೋಷಣೆ ಮಾಡಲಾಗಿದೆ.
ಈ ಬೆಂಗಳೂರು ಮುಂಚೆ-ಮುಂಬೈ ಮಧ್ಯೆ ಸಂಪರ್ಕ ಕಲ್ಪಿಸಲು ಉದ್ಯಾನ ಎಕ್ಸ್ ಪ್ರೆಸ್ ಮಾತ್ರ ಸಂಚಾರ ನಡೆಸುತ್ತಿದೆ. ಬೆಂಗಳೂರಿನಿಂದ ಗುಂಟಕಲ್ – ಸೊಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಣ, ಬೆಂಗಳೂರು-ಮುಂಬೈ ನಗರಗಳನ್ನು ಸಂಪರ್ಕಿಸುವ ಈ ಸೂಪರ್ ಫಾಸ್ಟ್ ರೈಲನ್ನು ಕರ್ನಾಟಕದ ಮಧ್ಯಭಾಗದಿಂದ ಕಳುಹಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರಹ್ಲಾದ್ ಜೋಶಿ ಮನವಿ ಮಾಡಿದರು. ಅವರಿಗೆ ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ತೇಜಸ್ವಿ ಸೂರ್ಯ ಸಾಥ್ ಕೊಟ್ಟಿದ್ದರು. ಮನವಿಗೆ ಪ್ರತಿಕ್ರಿಯಿಸಿದ ರೈಲ್ವೇ ಸಚಿವರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಾರ್ಗವಾಗಿ ಸಂಚರಿಸುವ ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಒಪ್ಪಿಗೆ ಸೂಚಿಸಿದೆ, ಅದಕ್ಕೀಗ ಅನುಮೋದನೆಯೂ ಸಿಕ್ಕಿದೆ.
ಇದನ್ನೂ ಓದಿ: ರೈಲಿನ ಶೌಚಾಲಯದಲ್ಲಿ 6 ಗಂಟೆಗಳ ಕಾಲ ಲಾಕ್ ಆದ ಪ್ರಯಾಣಿಕ, ಮುಂದೆ ಆಗಿದ್ದೆ ಬೇರೆ
ರೈಲ್ವೇ ಸಚಿವರಿಗೆ ಪ್ರಹ್ಲಾದ್ ಜೋಶಿ ಧನ್ಯವಾದ
ನಮ್ಮ ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಪತ್ರವನ್ನು ನೀಡಿದ ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @ಅಶ್ವಿನಿ ವೈಷ್ಣವ್ ಅವರಿಗೆ ಅನಂತ ಧನ್ಯವಾದಗಳು.
ನಮ್ಮ ಬಹುದಿನದ ಬೇಡಿಕೆ ಈ ರೈಲಿಗಾಗಿ ನಾನು ಕೇಂದ್ರ ರೈಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್… pic.twitter.com/1RbfUDxAvz
– ಪ್ರಲ್ಹಾದ್ ಜೋಶಿ (@JoshiPralhad) ಅಕ್ಟೋಬರ್ 23, 2025
ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ನೀಡಿದೆ ರೈಲ್ವೇ ಸಚಿವರಿಗೆ ಪ್ರಹ್ಲಾದ್ ಜೋಶಿ ಧನ್ಯವಾದ. ನಮ್ಮ ಬಹುದಿನದ ಬೇಡಿಕೆ ಈ ರೈಲಿಗಾಗಿ ನಾನು ಕೇಂದ್ರ ರೈಲ್ವೆ ಸಚಿವರಿಗೆ ವಿನಂತಿಸಿದ್ದೆ. ಜನರಿಗೆ ಈ ರೈಲುಗಳಿಗೆ ಅನುಕೂಲವಾಗುವಂತೆ ವ್ಯಾಪಾರ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ ಸಂಚಾರ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.