ಬೆಂಗಳೂರು, (ಡಿಸೆಂಬರ್ 15): ಕೈದಿಗಳಿಗೆ ರಾಜಾತಿಥ್ಯದಿಂದ ಸುದ್ದಿಯಲ್ಲಿರೋ ಪರಪ್ಪನ ಅಗ್ರಹಾರ ಜೈಲಿಗೆ ನೂತನ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಡಿಜಿಪಿ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದು, ಜೈಲಿನ ಹೊರಾಂಗಣ ಸೇರಿದಂತೆ ಪ್ರತಿ ಬ್ಯಾರಕ್, ಅಡುಗೆ ಮನೆ, ಆಸ್ಪತ್ರೆ, ಬೇಕರಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಇದೇ ವೇಳೆ ಡಿಜಿಪಿ ಅಲೋಕ್ ಕುಮಾರ್ ಅವರು ಕೊಲೆ ಆರೋಪಿ ದರ್ಶನ್ ಬ್ಯಾರಕ್ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣದ ವಿಚಾರಣೆ ಬಗ್ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅಲೋಕ್ ಕುಮಾರ್, ಜೈಲು ಭೇಟಿ ವೇಳೆ ದರ್ಶನ್ ಭೇಟಿ ಮಾಡಿ ಪ್ರಕರಣದ ವಿಚಾರಣೆ ಬಗ್ಗೆ ವಿಚಾರಣೆ ನಡೆಸಿದ್ದರು. ಯಾವುದೇ ಕುಂದುಕೊರತೆ ಬಗ್ಗೆ ಹೇಳಿಲ್ಲ. ಆರು ಮಂದಿ ಬ್ಯಾರಕ್ ನಲ್ಲಿದ್ದು ಆರಾಮವಾಗಿ ಇದ್ದಾರೆ ಎಂದು ಸ್ಪಷ್ಟಪಡಿಸಿದರು.