
<p>ಕೋಲ್ಕತಾ: 2026ರ ಐಪಿಎಲ್ ಟೂರ್ನಿಯಲ್ಲಿ ಹೊರಬಿದ್ದ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರಹಮಾನ್ಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಐಪಿಎಲ್ನಿಂದ ಒಂದೇ ಒಂದು ರುಪಾಯಿ ಸಿಗಲ್ಲ ಎಂದು ವರದಿಯಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.</p><p> </p><img><p>ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಹಿಂಸಾಚಾರವನ್ನು ಖಂಡಿಸಿ, ಆ ದೇಶದ ವೇಗಿ ಮುಸ್ತಾಫಿಜುರ್ ರಹಮಾನ್ರನ್ನು ಬಿಸಿಸಿಐ ಐಪಿಎಲ್ನಿಂದ ಹೊರಹಾಕಿದೆ.</p><img><p>ಹರಾಜಿನಲ್ಲಿ 9.2 ಕೋಟಿ ರು.ಗೆ ಬಿಕರಿಯಾಗಿದ್ದ ಮುಸ್ತಾಫಿಜುರ್ಗೆ ಈಗ ಒಂದು ರುಪಾಯಿ ಕೂಡ ಸಿಗುವುದಿಲ್ಲ ಎಂದು ತಿಳಿದುಬಂದಿದೆ.</p><img><p>ಈ ಬಗ್ಗೆ ಸಾಕಷ್ಟು ಚರ್ಚೆ ಸಹ ಆರಂಭಗೊಂಡಿದೆ. ಮುಸ್ತಾಫಿಜುರ್ ಸ್ವತಃ ತಾವೇ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿಲ್ಲ, ಇನ್ನು ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಿದ್ದರೂ ಅವರಿಗೇಕೆ ಅನ್ಯಾಯ ಎಂದು ಹಲವರು ವಾದಿಸುತ್ತಿದ್ದಾರೆ.</p><img><p>ಆದರೆ, ಐಪಿಎಲ್ ನಿಯಮಾವಳಿ ಪ್ರಕಾರ ಮುಸ್ತಾಫಿಜುರ್ಗೆ ಕೆಕೆಆರ್ ಯಾವುದೇ ಹಣ ಪಾವತಿಸುವಂತಿಲ್ಲ. ಅವರು ವಿಮೆ ಬಳಸಿಕೊಂಡು ಪರಿಹಾರ ಕೂಡ ಪಡೆಯಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.</p><img><p>ಒಂದು ವೇಳೆ ಮುಸ್ತಾಫಿಜುರ್ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದರೂ, ಕೋರ್ಟ್ನಲ್ಲಿ ಆ ಪ್ರಕರಣ ನಿಲುವುದಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p><img><p>ಇನ್ನು ಮುಸ್ತಾಫಿಜುರ್ ರಹಮಾನ್ ಅವರನ್ನು ಐಪಿಎಲ್ನಿಂದ ಹೊರದಬ್ಬಿದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರ ಬ್ಯಾನ್ ಮಾಡಲು ಅಲ್ಲಿನ ಸರ್ಕಾರ ತೀರ್ಮಾನಿಸಿದೆ.</p><img><p>ಇನ್ನು ಫೆಬ್ರವರಿ 07ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತನ್ನ ಪಾಲಿನ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಶಿಫ್ಟ್ ಮಾಡಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ, ಐಸಿಸಿ ಬಳಿ ಮನವಿ ಮಾಡಿಕೊಂಡಿದೆ. ಇದಕ್ಕೆ ಐಸಿಸಿ ಕ್ಯಾರೆ ಎಂದಿಲ್ಲ ಎನ್ನಲಾಗುತ್ತಿದೆ.</p>
Source link
ಐಪಿಎಲ್ನಿಂದ ಹೊರಬಿದ್ದ ಮುಸ್ತಾಫಿಜುರ್ಗೆ ಒಂದು ರುಪಾಯಿ ಕೂಡ ಸಿಗಲ್ಲ! ಯಾಕೆ ಹೀಗೆ?