ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್

ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್


ಬೆಂಗಳೂರಿನಲ್ಲಿ ಮಾತನಾಡಲು ಬಿಡದ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ ಜೂ.ಎನ್.ಟಿ.ಆರ್

ಟಾಲಿವುಡ್ ನಟ ಜೂನಿಯರ್ ಎನ್ ಟಿಆರ್ (ಜೆಆರ್ ಎನ್ ಟಿಆರ್) ಅವರು ಭಾನುವಾರ (ಮಾರ್ಚ್ 8) ಬೆಂಗಳೂರಿಗೆ ಆಗಮಿಸಿದ್ದರು. ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಅವರು ಇಲ್ಲಿಗೆ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಅಭಿಮಾನಿಗಳಿಗೆ ಅವಕಾಶ ಕೊಡಲಿಲ್ಲ. ಒಂದೇ ಸಮನೆ ಕೂಗು. ಆಗ ಜೂನಿಯರ್ ಎನ್ ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಜೂನಿಯರ್ ಎನ್ ಟಿಆರ್ ಕಿಮ್ಸ್ ಘಟಕಕ್ಕೆ ಬರಲು ಒಂದು ಕಾರಣವೂ ಇತ್ತು. 1983ರಲ್ಲಿ ಜೂ ಎನ್ ಟಿಆರ್ ಅವರ ತಾತ ಎನ್ ಟಿಆರ್ ಅವರೇ ಕಿಮ್ಸ್ ಗೆ ಅಡಿಗಲ್ಲು ಹಾಕಿದ್ದರು. 2009ರಲ್ಲಿ ಜೂನ್ ಎನ್ ಟಿಆರ್ ಭಾರಿ ರಸ್ತೆ ಅಪಘಾತಕ್ಕೆ ಒಳಗಾದ ಅವರು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಇದೇ ಕಾರಣಕ್ಕೆ ಇಂದು ಕಿಮ್ಸ್ ನ ಹೊಸ ಘಟಕದ ಉದ್ಘಾಟನೆಗೆ ಅವರು ಆಗಮಿಸಿದ್ದರು. ಅವರನ್ನು ಅಭಿಮಾನಿಗಳು ಖುಷಿಯಿಂದ ಸ್ವಾಗತಿಸಿದರು. ಅವರನ್ನು ನೋಡಲು ಜನ ಸಾಗರವೇ ನೆರೆದಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜೂ ಎನ್ ಟಿಆರ್: ಬಂದಿದ್ದೇಕೆ? ಆಡಿದ ಮಾತುಗಳೇನು?

ಮಾರ್ಚ್ 8 ಮಹಿಳಾ ದಿನಾಚರಣೆ. ಹೀಗಾಗಿ ಆ ಬಗ್ಗೆ ಅವರ ಬಗ್ಗೆ. ‘ಮಹಿಳೆಯರನ್ನು ಹೇಗೆ ಗೌರವಿಸಬೇಕು ಎಂದು ಪದೇ ಪದೇ ಹೇಳುವುದು ತನಗೆ ಇಷ್ಟವಿಲ್ಲ. ಪ್ರತಿಯೊಬ್ಬ ಪುರುಷನೂ ಆ ಸಂಸ್ಕೃತಿಯೊಂದಿಗೆ ಹುಟ್ಟಬೇಕು’ ಎಂದರು. ಜೊತೆಗೆ, ತಮ್ಮ ಮಕ್ಕಳಿಗೂ ಮಹಿಳೆಯರನ್ನು ಗೌರವಿಸುವುದನ್ನು ಹೇಳಿಕೊಡೋದಾಗಿ ಹೇಳಿದರು. ಸಿನಿಮಾದಲ್ಲಿ ಹೊರಗೆಯೂ ತುಂಬಾ ಸಾಧಾರಣವಾಗಿ ವರ್ತಿಸುವ ಎನ್ ಟಿಆರ್, ಮಹಿಳೆಯರ ಸುರಕ್ಷತೆ ಮತ್ತು ಗೌರವದ ಬಗ್ಗೆ ತುಂಬಾ ಚೆನ್ನಾಗಿ ಮಾತನಾಡಿದ್ದಕ್ಕಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರು ತಮ್ಮ ಅಭಿಮಾನಿಗಳ ಬಗ್ಗೆ ಮತ್ತು ಮನೆಗೆ ಎಚ್ಚರಿಕೆಯಿಂದ ಹೋಗುವಂತೆ ಸಲಹೆ ನೀಡಿ.

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

HARI (@harii_postings) ಅವರು ಹಂಚಿಕೊಂಡ ಪೋಸ್ಟ್

ಜೂನಿಯರ್ ಎನ್ ಟಿಆರ್ ಅವರು ಮಾತು ಆರಂಭಿಸುವಾಗ ಫ್ಯಾನ್ಸ್ ಅವರ ಹೆಸರನ್ನು ಕೂಗಿದರು.. ಆಗ ಫ್ಯಾನ್ಸ್ ಜೂನಿಯರ್ ಎನ್ ಟಿಆರ್ ಅವರಿಗೆ ಮಾತನಾಡಲು ಅವಕಾಶ ನೀಡಿಲ್ಲ. ಸುಮ್ಮನಿರಿ, ಸುಮ್ಮನಿರಿ ಎಂದು ಖಡಕ್ ಎಚ್ಚರಿಕೆ ನೀಡಿದ ಬಳಿಕ ಫ್ಯಾನ್ಸ್ ಸುಮ್ಮನಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.





Source link

Leave a Reply

Your email address will not be published. Required fields are marked *