Headlines

ಬೆಂಗಳೂರಲ್ಲಿ ಹಳೆ ವಾಹನಗಳ ಸಂಖ್ಯೆ ಹೆಚ್ಚಳ: ಗುಜರಿಗೆ ಹಾಕಲು ಮಾಲೀಕರು ಹಿಂದೇಟು

ಬೆಂಗಳೂರಲ್ಲಿ ಹಳೆ ವಾಹನಗಳ ಸಂಖ್ಯೆ ಹೆಚ್ಚಳ: ಗುಜರಿಗೆ ಹಾಕಲು ಮಾಲೀಕರು ಹಿಂದೇಟು


ಬೆಂಗಳೂರು, ಡಿಸೆಂಬರ್ 1: ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ (ಬೆಂಗಳೂರು) ಹಳೆಯ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರೊಂದಿಗೆ ವಾಯುಮಾಲಿನ್ಯದ ಪ್ರಮಾಣವು ಕೂಡಲಿದೆ, ವಾಹನ ಮಾತ್ರ ತಮ್ಮ ಹಳೆಯ ವಾಹನಗಳನ್ನು (ಹಳೆಯ ವಾಹನಗಳು) ಗುಜರಿಗೆ ಹಾಕಲು ಹಿಂದೇಟು ಹಾಕುತ್ತಿದ್ದಾರೆ.

2023ರಲ್ಲೇ ಗುಜರಿ ನೀತಿ ಜಾರಿ

ರಾಜ್ಯದಲ್ಲಿ ಹಳೆಯ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ, ಕೇಂದ್ರ ಸರ್ಕಾರ ದೇಶದೆಲ್ಲೆಡೆ 2023 ಏಪ್ರಿಲ್ 1 ರಿಂದ ಗುಜರಿ ನೀತಿ ಜಾರಿ, 15 ವರ್ಷ ದಾಟಿದ ದೇಶದ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ನಿಯಮವಿದೆ. ಎನ್ಜಿಟಿ ರೂಲ್ಸ್ ಪ್ರಕಾರ ದೆಹಲಿಯಲ್ಲಿ 10 ವರ್ಷ ಮೇಲ್ಪಟ್ಟ ಪೆಟ್ರೋಲ್ ವಾಹನ ಮತ್ತು 15 ವರ್ಷದಿಂದ ಡಿಸೇಲ್ ವಾಹನಕ್ಕೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಬೆಂಗಳೂರಿನದ್ದು ಅತ್ಯಂತ ಕೆಟ್ಟ ಟ್ರಾಫಿಕ್, ನಿಷ್ಪ್ರಯೋಜಕ ಸಂಚಾರ ಪೊಲೀಸರು: ಉತ್ತರ ಪ್ರದೇಶದ ಎಸ್ಪಿ ಸಂಸದ ಆಕ್ರೋಶ

ರಾಜ್ಯದಲ್ಲಿ 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಮತ್ತು ಸ್ವಂತ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ನಿಯಮವಿದೆ. ತಮ್ಮ ಸ್ವಂತ ವಾಹನಗಳನ್ನು ಗುಜರಿಗೆ ಹಾಕಿದರೆ ಹೊಸ ವಾಹನ ಖರೀದಿಸುವಾಗ ಸಬ್ಸಿಡಿ ಕೂಡ ನೀಡುತ್ತಿದ್ದಾರೆ. ಆದರೆ 15 ವರ್ಷ ಮೇಲ್ಪಟ್ಟ ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ವಾಹನ ಹಿಂದೇಟು ಹಾಕುತ್ತಿದ್ದಾರೆ.

ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಹೇಳಿದ್ದಿಷ್ಟು

ಈ ಬಗ್ಗೆ ಮಾತಾನಾಡಿರುವ ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್, ನಮ್ಮ ರಾಜ್ಯದಲ್ಲಿ ಕಡ್ಡಾಯವಾಗಿ ಹಳೆಯ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ರೂಲ್ಸ್ ಇಲ್ಲ, ಯಾವುದೇ ವಾಹನವನ್ನು ಹಾಕಲು ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ಮುಂದಾಗುತ್ತಿಲ್ಲ. ಕಳೆದ ವರ್ಷ ಸುಮಾರು 4 ಸಾವಿರ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿದ್ದಾರೆ ಎಂದು ಮಾಹಿತಿ ಇದೆ.

ಇನ್ನು ಬೆಂಗಳೂರಿನಲ್ಲಿ 15 ವರ್ಷ ಮೀರಿದ ಬೈಕ್‌ಗಳ ಸಂಖ್ಯೆ – 24,46,372 ಇದ್ದರೆ, ಕಾರುಗಳ ಸಂಖ್ಯೆ 7,059,39, ಲಾರಿ, ಬಸ್ ಸೇರಿದಂತೆ ಇತರೆ ವಾಹನಗಳ ಸಂಖ್ಯೆ 5,93,028. ಬೆಂಗಳೂರಿನಲ್ಲಿ 15 ವರ್ಷ ಮೀರಿದ 37,45,339 ಲಕ್ಷ ವಾಹನಗಳಿವೆ.

ಹಳೆಯ ವಾಹನಗಳನ್ನು ಗುಜರಿಗೆ ಹಾಕುವುದು ಒಳ್ಳೆಯದು: ಅರುಣ್ ಪ್ರಸಾದ್

ಕರ್ನಾಟಕದಲ್ಲೇ ಬೆಂಗಳೂರಿನಲ್ಲಿ ಅತೀ ಹೆಚ್ಚು ಹಳೆಯ ವಾಹನಗಳಿವೆ. ಒಟ್ಟು 37 ಲಕ್ಷ ವಾಹನಗಳು, ಅದರಲ್ಲಿ 24 ಲಕ್ಷ ದ್ವಿಚಕ್ಷ ವಾಹನಗಳು, 7 ಲಕ್ಷ ಕಾರುಗಳಿವೆ. ಈ ಬಗ್ಗೆ ಮಾತಾನಾಡಿರುವ ಪರಿಸರ ಹೋರಾಟಗಾರ ಅರುಣ್ ಪ್ರಸಾದ್, ಹಳೆಯ ವಾಹನಗಳಿಂದ ವಾಯುಮಾಲಿನ್ಯ, ಇಂತಹ ಹಳೆಯ ವಾಹನಗಳನ್ನು ಗುಜರಿಗೆ ಹಾಕುವುದು ಒಳ್ಳೆಯದು.

ಇದನ್ನೂ ಓದಿ: ಇದು ಊಟ ಅಲ್ಲ, ಬೆಂಗಳೂರು: ಮೋದಿ ಮಾಡಿದ ಈ ವಾತಾವರಣ

ಒಟ್ಟಿನಲ್ಲಿ ಹಳೆಯ ವಾಹನಗಳಿಂದ ವಾಯು ಮಾಲಿನ್ಯದ ಪ್ರಮಾಣವು ಹೆಚ್ಚಾಗುತ್ತಿದೆ, ತಮ್ಮ ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕುವುದು ಒಳ್ಳೆಯದು ಎಂಬ ಅಭಿಪ್ರಾಯವಿದೆ. ಆದರೆ ಹಳೇ ವಾಹನಗಳು ಏನು ಮಾಡುತ್ತಾರೆ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *