Headlines

ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?

ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?


ಬೆಳಗಾವಿ, ಡಿಸೆಂಬರ್ 19: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ಮತ್ತೊಂದೆಡೆ ವಿಧೇಯಕದ ವಿರುದ್ಧ ವಿರೋಧದ ಧ್ವನಿ ರಾಜ್ಯಪಾಲರ ಅಂಗಳ ತಲುಪಿದೆ. ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿಧೇಯಕಕ್ಕೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯುವಂತೆ ಮತ್ತು ಅದನ್ನು ವಿಧಿ 200 ರ ವರ್ಷದ ರಾಷ್ಟ್ರಪತಿಗಳ ಪರಿಗಣನೆಗೆ ಒತ್ತಾಯಿಸಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ವಿವರವಾದ ಪ್ರಾತಿನಿಧ್ಯವನ್ನು ಸಲ್ಲಿಸಿರುವುದಾಗಿ ವಕೀಲ ಗಿರೀಶ್ ಭಾರದ್ವಾಜ್ ನಲ್ಲಿ ಸಂದೇಶವನ್ನು ಪ್ರಕಟಿಸಲಾಗಿದೆ. ಜೊತೆಗೆ, ರಾಜ್ಯಪಾಲರಿಗೆ ಬರೆದ ಪತ್ರದ ಪ್ರತಿಯನ್ನೂ ಲಗತ್ತಿಸಿದ್ದಾರೆ.

ವಿಧೇಯಕದ ವಿಭಾಗ 4 ಮತ್ತು 5 ಕಾರ್ಯಾಂಗದಲ್ಲಿ ಅನಿಯಂತ್ರಿತ ಅಧಿಕಾರವನ್ನು ನೀಡುತ್ತವೆ. ಇದು ವಿಧಿ 19(1)(ಎ), ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದ ಕಾನೂನು ಮತ್ತು ಮೂಲ ರಚನೆಯನ್ನು ಉಲ್ಲಂಘಿಸುತ್ತದೆ ಎಂದು ಗಿರೀಶ್ ಪ್ರತಿಪಾದಿಸಿದ್ದಾರೆ.

ವಕೀಲ ಗಿರೀಶ್ ಭಾರದ್ವಾಜ್ ಸಂದೇಶ

ವಾಕ್ ಸ್ವಾತಂತ್ರ್ಯ ಹಕ್ಕು ಉಲ್ಲಂಘನೆ: ಶೋಭಾ ಕರಂದ್ಲಾಜೆ ಆಕ್ಷೇಪ, ರಾಜ್ಯಪಾಲರಿಗೆ ಪತ್ರ

ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯಬೇಕು) ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಜೆಲಾ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ದ್ವೇಷ ಭಾಷಣವನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಮಸೂದೆಯು ಕಾರ್ಯಾಂಗಕ್ಕೆ ಅತಿಯಾದ ಮತ್ತು ಅಸ್ಪಷ್ಟ ಅಧಿಕಾರವನ್ನು ಹೊಂದಿದೆ, 19(1)(a) ವಿಧಿಯ ಅಡಿಯಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಬೆದರಿಕೆ ಹಾಕುತ್ತದೆ ಮತ್ತು ಸ್ಪಷ್ಟ ವ್ಯಾಖ್ಯಾನಗಳನ್ನು ಹೊಂದಿಲ್ಲ ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಶೋಭಾ ಕರಂದ್ಲಾಜೆ ಪ್ರತಿಪಾದಿಸಿದ್ದಾರೆ.

ಏತನ್ಮಧ್ಯೆ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಇದರೊಂದಿಗೆ, ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಕಾನೂನಾಗಿ ರೂಪುಗೊಳ್ಳುವುದು ಖಚಿತವಾಗಿದೆ. ಇನ್ನು ರಾಜ್ಯಪಾಲರ ಅಂಕಿತ ಬಿದ್ದ ಬೆನ್ನಲ್ಲೇ ಕಾನೂನಾಗಿ ಅಸ್ತಿತ್ವಕ್ಕೆ ಬರಲಿದೆ. ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರವನ್ನು ಮತ್ತು ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ಶಿಕ್ಷೆಯನ್ನು ಉಪಬಂಧಿಸಲು ಮತ್ತು ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸಲು ಅಗತ್ಯವೆಂದು ಪರಿಗಣಿಸಲಾಗಿದೆ ಎಂದು ಗೃಹ ಸಚಿವ ಡಾ.

ಇದನ್ನೂ ಓದಿ: ಏನಿದು ದ್ವೇಷ ಅಪರಾಧಗಳ ಮಸೂದೆ? ದ್ವೇಷಾಪರಾಧಕ್ಕೆ ಶಿಕ್ಷೆಯೇನು? ಇಲ್ಲಿದೆ ಮಾಹಿತಿ

ಸುಧೀರ್ಘ ಅವಧಿಯ ಚರ್ಚೆಯ ನಂತರ ಪ್ರಸ್ತಾವವನ್ನು ಸಭಾಪತಿಯವರು ಧ್ವನಿಮತಕ್ಕೆ ಹಾಕಿದರು. ಸದಸ್ಯರ ಸಹಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *