ಬೆಂಗಳೂರು ಮೆಟ್ರೋ ಟ್ರ್ಯಾಕ್ (ಸಾಂದರ್ಭಿಕ ಚಿತ್ರ)
ಬೆಂಗಳೂರು, ಡಿಸೆಂಬರ್ 18: ಆರೆಂಜ್ ಲೈನ್ ಮೆಟ್ರೋ (ಆರೆಂಜ್ ಲೈನ್ ಮೆಟ್ರೋ) ಕಾಮಗಾರಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷ ಕಳೆದರೂ ಕಾಮಗಾರಿಗೆ ಟೆಂಡರ್ ಕರೆಯಲು ಬಿಎಂಆರ್ ಸಿಎಲ್ (BMRCL) ಇನ್ನೂ ಮುಂದಾಗಿಲ್ಲ. ಕೇಂದ್ರ ಸರ್ಕಾರ ಅನುಮತಿ ನೀಡಿ ಒಂದು ವರ್ಷ ಕಳೆದು 123 ದಿನಗಳು ಆಗಿವೆ. ಮೆಟ್ರೋ ಕಾಮಗಾರಿ ಮಾತ್ರ ಶುರುವಾಗಿಲ್ಲ. ಒಂದು ದಿನ ಕಾಮಗಾರಿ ವಿಳಂಬವಾದರೆ ಬಿಎಂಆರ್ ಸಿಎಲ್ ಗೆ ಸುಮಾರು 2 ಕೋಟಿ ರೂಪಾಯಿ ಹೆಚ್ಚುವರಿ ಹೊರೆ ಆಗಲಿದೆ. 487 ದಿನ ವಿಳಂಬವಾಗಿರುವುದಕ್ಕೆ ಬಿಎಂಆರ್ ಸಿಎಲ್ 974 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ.
ಕಳೆದ ವರ್ಷ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ 3ನೇ ಹಂತದ ಮೆಟ್ರೋಗೆ ಶಂಕು ಸ್ಥಾಪನೆ ಮಾಡಲಾಯಿತು. ಇದೀಗ ವರ್ಷ ಕಳೆದರೂ ಕಾಮಗಾರಿ ಆರಂಭದ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2024 ರ ಆಗಸ್ಟ್ 16 ರಂದು ಕೇಂದ್ರ ಸರ್ಕಾರ ಮೂರನೇ ಹಂತದ ಆರೆಂಜ್ ಲೈನ್ಗೆ ಅನುಮತಿ ನೀಡಿತ್ತು. ಆದರೆ ಇಲ್ಲಿಯವರೆಗೆ ನಮ್ಮ ಮೆಟ್ರೋ ಅಧಿಕಾರಿಗಳು ಸಿವಿಲ್ ವರ್ಕ್ ಮಾಡಲು ಟೆಂಡರ್ ಕರೆಯಲು ಮುಂದಾಗಿಲ್ಲ. ಇದರಿಂದ ಮೆಟ್ರೋ ಕಾಮಗಾರಿಗೆ ಟೆಂಡರ್ ಕಾಸ್ಟ್ ಸಾವಿರಾರು ಕೋಟಿ ರೂಪಾಯಿ ಹೆಚ್ಚಾಗಲಿದೆ.
ಎಲ್ಲಿಂದ ಎಲ್ಲಿವರೆಗಿದೆ ಆರೆಂಜ್ ಲೈನ್ ಮೆಟ್ರೋ?
ನಮ್ಮ ಮೆಟ್ರೋ ಮೂರನೇ ಹಂತದ ಆರೆಂಜ್ ಲೈನ್ ಕಾರಿಡಾರ್- 1 ಜೆಪಿ ನಗರದಿಂದ ಕೆಂಪಾಪುರ 32.15 ಕಿಮೀ. ಇದೆ. ಕಾರಿಡಾರ್- 2 ಹೊಸಹಳ್ಳಿ- ಕಡಬಗೆರೆ 12.50 ಕಿಮೀ ಇದೆ. ಕಿತ್ತಳೆ ಮಾರ್ಗ ಒಟ್ಟು 44.65 ಕಿಮೀ ವಿಸ್ತೀರ್ಣವಿದೆ.
ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್: ಹಳದಿ ಮಾರ್ಗದಲ್ಲಿನ ಮೆಟ್ರೋ ಸ್ಟೇಷನ್ ಸಮೀಪ ಬಿಎಂಟಿಸಿ ಬಸ್ ನಿಲ್ದಾಣಗಳ ವ್ಯವಸ್ಥೆ
ಒಟ್ಟಿನಲ್ಲಿ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದರೂ ಬಿಎಂಆರ್ ಸಿಎಲ್ ಅಧಿಕಾರಿಗಳು ಕಾಮಗಾರಿ ಆರಂಭಿಸಿರುವುದು ದುರಂತವೇ ಸರಿ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ