ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ
ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲಿಯೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರುಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾಳೆ. ಸರ ಎಳೆದ…