180 ಎಕರೆ ಕೃಷಿಭೂಮಿಗೆ ಅನುಕೂಲವಾಗುವ ಕೆರೆಗೆ ಮರುಜೀವ: ರೈತರಲ್ಲಿ ಮೂಡಿದ ಭರವಸೆಯ ಬೆಳಕು | Muddenahalli Lake That Benefits 180 Acres Of Farmland Is Brought Back To Life Channagiri Davanagere Mrq
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ‘ನಮ್ಮೂರು ನಮ್ಮಕೆರೆ’ ಕಾರ್ಯಕ್ರಮದಡಿ ಐತಿಹಾಸಿಕ ಕೆರೆ ಅಭಿವೃದ್ಧಿಗೆ ಚಾಲನೆ ನೀಡಿದೆ. ಈ ಪುನಶ್ಚೇತನ ಕಾಮಗಾರಿಯಿಂದ 180 ಎಕರೆ ಕೃಷಿಭೂಮಿಗೆ ನೀರಾವರಿ ಮತ್ತು ಸಾವಿರಾರು ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ದಾವಣಗೆರೆ: ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ದೇವರ ಕಟ್ಟೆ ಹೆಸರಿನ ಕೆರೆ ಅಭಿವೃದ್ಧಿ ಮತ್ತು ಪುನಶ್ಚೇತನ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚನ್ನಗಿರಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಮಂಗಳವಾರ ನಮ್ಮೂರು ನಮ್ಮಕೆರೆ ಕಾರ್ಯಕ್ರಮದಲ್ಲಿ ಶ್ರೀ ಮೌದ್ಗಲ್ ಆಂಜನೇಯ…