ನಮಗೆ ದೇಶ ಮೊದಲು, ಕೆಲವರಿಗೆ ಮೋದಿಯೇ ಮೊದಲು; ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಪರೋಕ್ಷ ವಾಗ್ದಾಳಿ
ನವದೆಹಲಿ, ಜೂನ್ 25: ಕೇಂದ್ರ ಸರ್ಕಾರ ರಚಿಸಿದ್ದ ಸಂಸದರ ನಿಯೋಗದಿಂದ ವಿದೇಶಕ್ಕೆ ಹೋಗಿ ಬಂದ ನಂತರ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಬಿಜೆಪಿ ಜೊತೆ ಆಪ್ತವಾಗಿ ಗುರುತಿಸಿಕೊಂಡಿದ್ದಾರೆ. ಇದು ಕಾಂಗ್ರೆಸ್ ಪಾಲಿಗೆ ನುಂಗಲಾರದ ತುತ್ತಾಗಿದೆ. ಸದ್ಯದ ಮಟ್ಟಿಗೆ ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪವಾಗಿರುವ ಶಶಿ ತರೂರ್ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿಲ್ಲ. ಹಾಗೇ, ಆಗಾಗ ಪ್ರಧಾನಿ ಮೋದಿಯನ್ನು ಹೊಗಳುತ್ತಿರುವುದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವೇ ದಿನಗಳ ಹಿಂದಷ್ಟೇ ಪ್ರಧಾನಿ ಮೋದಿಯವರನ್ನು ಶಶಿ ತರೂರ್…