‘ಸರ್ಕಾರದ ಬಳಿ ಹಣ ಇಲ್ಲ’ ಅಂತಾ ನಾನು ಹೇಳಿಲ್ಲ: ಗೃಹಸಚಿವ ಪರಮೇಶ್ವರ್ ಸ್ಪಷ್ಟನೆ | Parameshwar denies no funds statement | Karnataka Home Minister Parameshwar Clarifies No Funds Claim Badami Development Proposal Rav
ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬಾದಾಮಿ ಅಭಿವೃದ್ಧಿಗೆ ಕೇಂದ್ರದಿಂದ ಸಹಾಯ ಪಡೆಯಲು ಸೂಚಿಸಿದ್ದಾಗಿ ತಿಳಿಸಿದರು. ರಾಜ್ಯದ ಆರ್ಥಿಕ ಸ್ಥಿತಿ ಸದೃಢವಾಗಿದೆ ಎಂದೂ ಅವರು ಹೇಳಿದರು. ಬೆಂಗಳೂರು (ಜೂ.25): ಸರ್ಕಾರದ ಬಳಿ ಹಣ ಇಲ್ಲ ಅಂತಾ ನಾನು ಹೇಳಿಯೇ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದರು. ಬಾಗಲಕೋಟೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಅಭಿವೃದ್ಧಿಗೆ ನಮ್ಮ ಬಳಿ ಹಣ ಇಲ್ಲ, ಸಿದ್ದರಾಮಯ್ಯರ ಬಳಿಯೂ ಇಲ್ಲ. ದೊಡ್ಡ ಯೋಜನೆ ರೂಪಿಸಿ ಕೇಂದ್ರಕ್ಕೆ ಕಳುಹಿಸಿಕೊಡಿ…