
ಇಸ್ಲಾಮಾಬಾದ್, ಮಾರ್ಚ್ 28: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (ಆಪರೇಷನ್ ಸಿಂಧೂರ್) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (ಪಾಕಿಸ್ತಾನ) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ ಕಂಗೆಟ್ಟಿದ್ದ ಪಾಕಿಸ್ತಾನ ಕದನವಿರಾಮಕ್ಕೆ ಮನವಿ ಮಾಡಿತ್ತು. ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿದ ಬಳಿಕ ಭಾರತ ಕದನವಿರಾಮಕ್ಕೆ ಒಪ್ಪಿಕೊಂಡರೂ ಪಾಕಿಸ್ತಾನ ಮಾತ್ರ ಭಾರತದ ವಿರುದ್ಧ ಕತ್ತಿ ಮಸೆಯುವುದನ್ನು ನಿಲ್ಲಿಸಿಲ್ಲ.
ಎರಡನೇ ಕಾಂಗ್ರೆಸ್ ಸಂಶೋಧನಾ ಸೇವೆ (CRS) ಯ ಹೊಸ ವರದಿಯು ಪಾಕಿಸ್ತಾನವು ಭಯೋತ್ಪಾದಕ ಗುಂಪುಗಳಿಗೆ ನಿರಂತರವಾಗಿ ಆಶ್ರಯ ನೀಡುತ್ತಿದೆ ಎಂದು ಘೋಷಿಸಲಾಗಿದೆ. ಹಾಗಿದ್ದರೂ, ಈ ವರದಿಯಲ್ಲಿ ಭಾರತದ ಉಲ್ಲೇಖವನ್ನೂ ಮಾಡಲಾಗಿಲ್ಲ, ಭಾರತದ ಮೇಲೆ ವಿಶೇಷವಾಗಿ ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೇಲೆ ಇತ್ತೀಚೆಗೆ ಕಣ್ಣು ನೆಟ್ಟಿರುವ ಉಗ್ರರ ಗುಂಪುಗಳು ಪಾಕಿಸ್ತಾನದ ನೆಲದಿಂದ ಕಾರ್ಯನಿರ್ವಹಿಸುವುದನ್ನು ಮುಂದುವರಿಸಿವೆ ಎಂದು ಈ ವರದಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಲಾಕ್ ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಿಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ
ಮಾರ್ಚ್ 25 ರ ಸಿಆರ್ ಎಸ್ “ಇನ್ ಫೋಕಸ್” ವರದಿ ಪಾಕಿಸ್ತಾನದಲ್ಲಿರುವ 15 ಉಗ್ರ ಸಂಘಟನೆಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಹಲವು ಅಮೆರಿಕದಿಂದ ವಿದೇಶಿ ಭಯೋತ್ಪಾದಕ ಸಂಘಟನೆಗಳು (ಎಫ್ಟಿಒ) ಎಂದು ತಿಳಿದುಬಂದಿದೆ. ಲಷ್ಕರ್-ಎ-ತೈಬಾ (ಎಲ್ಇಟಿ), ಜೈಶ್-ಎ-ಮೊಹಮ್ಮದ್ (ಜೆಇಎಂ), ಹರಕತ್-ಉಲ್ ಜಿಹಾದ್ ಇಸ್ಲಾಮಿ (ಎಚ್ಯುಜಿ), ಹರಕತ್ ಉಲ್-ಮುಜಾಹಿದೀನ್ (ಎಚ್ಎಂ) ಮತ್ತು ಹಿಜ್ಬುಲ್ ಮುಜಾಹಿದೀನ್ (ಎಚ್ಎಂ) ಮುಂತಾದ ಭಯೋತ್ಪಾದಕ ಗುಂಪುಗಳಿವೆ.
ದಕ್ಷಿಣ ಏಷ್ಯಾ ತಜ್ಞ ಕೆ. ಅಲನ್ ಕ್ರೋನ್ಸ್ಟಾಡ್ ಸಿದ್ಧಪಡಿಸಿದ ಸಿಆರ್ಎಸ್ ವರದಿಯು ಪಾಕಿಸ್ತಾನವನ್ನು ಬಲಿಪಶು ದೇಶ ಎಂದು ಚಿತ್ರಿಸಿದೆ. ಆದರೂ ಅದು ಭಾರತವನ್ನು ದೀರ್ಘಕಾಲದವರೆಗೆ ಗುರಿಯಾಗಿಸಿಕೊಂಡಿರುವ ಭಯತ್ಪಾದಕ ಜಾಲಗಳನ್ನು ಹೊಂದಿದೆ ಎಂದು ಕೂಡ ಉಲ್ಲೇಖಿಸಲಾಗಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ