ಇಸ್ಲಮಾಬಾದ್​​ನಲ್ಲಿ 12 ಜನರನ್ನು ಬಲಿ ಪಡೆದ ಬಾಂಬ್ ದಾಳಿಗೆ ಭಾರತವೇ ಕಾರಣವೆಂದ ಪಾಕಿಸ್ತಾನ!

ಇಸ್ಲಮಾಬಾದ್​​ನಲ್ಲಿ 12 ಜನರನ್ನು ಬಲಿ ಪಡೆದ ಬಾಂಬ್ ದಾಳಿಗೆ ಭಾರತವೇ ಕಾರಣವೆಂದ ಪಾಕಿಸ್ತಾನ!


ಇಸ್ಲಾಮಾಬಾದ್, ನವೆಂಬರ್ 11: 12 ಜನರ ಸಾವಿಗೆ ಕಾರಣವಾದ ಇಸ್ಲಾಮಾಬಾದ್ ನ್ಯಾಯಾಲಯದ ಹೊರಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಗೆ (ಬಾಂಬ್ ದಾಳಿ) ಪಾಕಿಸ್ತಾನದ (ಪಾಕಿಸ್ತಾನ) ಪ್ರಧಾನಿ ಶೆಹಬಾಜ್ ಷರೀಫ್ ಭಾರತವೇ ಕಾರಣವೆಂದು ಆರೋಪಿಸಲಾಗಿದೆ. ಅಫ್ಘಾನಿಸ್ತಾನದ ಗಡಿಯ ಬಳಿಯ ವಾನಾದ ಕ್ಯಾಡೆಟ್ ಕಾಲೇಜಿನಲ್ಲಿ ಸೋಮವಾರ ನಡೆದ ದಾಳಿಯಲ್ಲಿ ಭಾರತದ ಪಾತ್ರವಿದೆ ಎಂದು ಅವರು ಆರೋಪಿಸಿದ್ದಾರೆ.

ಪಾಕಿಸ್ತಾನ ಸರ್ಕಾರದ ಸುದ್ದಿ ಸಂಸ್ಥೆಯಾದ ಅಸೋಸಿಯೇಟೆಡ್ ಪ್ರೆಸ್ ಆಫ್ ಪಾಕಿಸ್ತಾನ (APP) ಪ್ರಕಾರ, ಈ ಅವಳಿ ದಾಳಿಗಳಿಗೆ ಭಾರತ ಪ್ರಾಯೋಜಿತ ಭಯೋತ್ಪಾದಕ ಪ್ರಾಕ್ಸಿಗಳು ಕಾರಣ ಎಂದು ಪಾಕ್ ಪ್ರಧಾನಿ ಆರೋಪಿಸಿದ್ದಾರೆ. “ಈ ದಾಳಿಗಳು ಪಾಕಿಸ್ತಾನವನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಭಾರತದ ರಾಜ್ಯ ಪ್ರಾಯೋಜಿತ ಭಯೋತ್ಪಾದನೆಯ ಮುಂದುವರಿಕೆಯಾಗಿದೆ” ಎಂದು ಅವರು ಮಾಧ್ಯಮಗಳೆದುರು ಹೇಳಿದ್ದಾರೆ. ಆದರೆ, ಈ ಹುಸಿ ಆರೋಪಕ್ಕೆ ಯಾವುದೇ ಪುರಾವೆಗಳನ್ನು ಅವರು ನೀಡಿಲ್ಲ.

ಇದನ್ನೂ ಓದಿ: ಪಾಕಿಸ್ತಾನದ ಕೋರ್ಟ್ ಹೊರಗೆ ನಿಲ್ಲಿಸಿದ್ದ ಕಾರು ಸ್ಫೋಟ; 12 ಜನರ ಸಾವು

ದಕ್ಷಿಣ ಏಷ್ಯಾದಲ್ಲಿ ಭಯೋತ್ಪಾದನೆಯ ತಾಣವಾಗಿರುವ ಪಾಕಿಸ್ತಾನವು ಬಹಳ ಹಿಂದಿನಿಂದಲೂ ಭಯೋತ್ಪಾದನೆಯ ರಫ್ತುದಾರನಾಗಿದೆ. ತಾನೇ ಭಯೋತ್ಪಾದಕರಿಗೆ ಆಶ್ರಯ ನೀಡಿದೆ. ಆ ಉಗ್ರರು ಪಾಕಿಸ್ತಾನದ ಮೇಲೆ ದಾಳಿ ನಡೆಸಿದಾಗ ಭಾರತವನ್ನು ಹೊಣೆಗಾರರನ್ನಾಗಿ ಮಾಡುವುದು ಪಾಕಿಸ್ತಾನಕ್ಕೆ ಹೊಸತೇನಲ್ಲ.

ಇತ್ತ ದೆಹಲಿಯಲ್ಲಿ ನಡೆದ ಕಾರು ಬಾಂಬ್ ಸ್ಫೋಟದ ಹಿಂದೆ ಎನ್ನಲಾದ ಕಾಶ್ಮೀರದ ಗಡಿಯ ಭಯೋತ್ಪಾದಕರ ನಂಟಿನ ಬಗ್ಗೆ ತನಿಖಾಧಿಕಾರಿಗಳಿಗೆ ಕೆಲವು ಸಾಕ್ಷಿಗಳು ಸಿಕ್ಕಿವೆ. ಎರಡೂ ದೇಶಗಳಲ್ಲಿ ಒಂದೇ ದಿನ ಕಾರು ಬಾಂಬ್ ಸ್ಫೋಟ ಸಂಭವಿಸಿರುವುದು ಕಾಕತಾಳೀಯ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *