
ಬೆಂಗಳೂರು, ಮಾರ್ಚ್ 30: ಪರಪ್ಪನ ಅಗ್ರಹಾರದಲ್ಲಿ ನಿರಂತರವಾಗಿ ಅವ್ಯವಹಾರ ಪ್ರಕರಣಗಳು ವರದಿಯಾಗುತ್ತಿವೆ. ಡಿಜಿಪಿ ಅಲೋಕ್ ಕುಮಾರ್ ಅವರಿಂದ (ಡಿಜಿಪಿ ಅಲೋಕ್ ಕುಮಾರ್) ಜಾರಿಯಾಗಿರುವ ಕಟ್ಟುನಿಟ್ಟಿನ ಕ್ರಮದ ನಂತರವೂ ಈ ಅವ್ಯವಹಾರಗಳಿಗೆ ಬ್ರೇಕ್ ಬಿದ್ದಿಲ್ಲ. ಜೈಲಿನಲ್ಲೇ ಕೂತು ಕೈದಿಗಳು ವೀಡಿಯೋ ಮಾಡಿರುವುದು ಚರ್ಚೆಯಾದ ಬೆನ್ನಲ್ಲೇ ಕಳೆದ ಗುರುವಾರ ಮತ್ತೊಂದು ಅಕ್ರಮ ತಡವಾಗಿ ಬೆಳಕಿಗೆ ಬಂದಿದೆ.ಕೇಂದ್ರ ಕಾರಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಕಳ್ಳಸಾಗಣೆ ಮಾಡಿ ಹತ್ಯೆಗೈದ 27 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ತಪಾಸಣೆ ವೇಳೆ ವಿಷಯ ಬಯಲು
ಮಾರ್ಚ್ 26 ರಂದು ಸಂಜೆ 4 ಗಂಟೆಗೆ ಸಾಮಾನ್ಯ ಭೇಟಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಯಾಗಿರುವ ರಿತಿಕಾ ರೈ, ಅಂಡರ್ಟ್ರಯಲ್ ಕೈದಿ ಫರ್ಹಾನ್ ಖಾನ್ ಅವರನ್ನು ಭೇಟಿ ಮಾಡಲು ಮಾನ್ಯ ಪಾಸ್ ಪಡೆದು ಬಂದಿದ್ದಳು. ಸಾಮಾನ್ಯ ತಪಾಸಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅನುಮಾನ ಉಂಟಾಗಿ ಸವಿವರ ಪರಿಶೀಲನೆ ನಡೆಸಿದಾಗ, ಮಹಿಳೆ ತನ್ನ ದೇಹದ ಖಾಸಗಿ ಭಾಗದಲ್ಲಿ ತುಂಬಾಕು ಪದಾರ್ಥಗಳ ಮೂರು ಪ್ಯಾಕೆಟ್ಗಳು ಮತ್ತು ಏರ್ಟೆಲ್ 5ಜಿ ಸಿಮ್ ಕಾರ್ಡ್ಗಳನ್ನು ಅಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈಗಳು!
ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸರಿಗೆ ಒಪ್ಪಿಸಲಾಗಿದೆ. ಜೈಲು ಅಧೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ರಿತಿಕಾ ರೈ ಮತ್ತು ಫರ್ಹಾನ್ ಖಾನ್ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿಕರು) ಕಾಯ್ದೆ 2022 ಮತ್ತು ಬಿಎನ್ಎಸ್ ಸೆಕ್ಷನ್ 323 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.