Headlines

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

ಪವಿತ್ರಾಗೆ ದೊಡ್ಡ ನಿರಾಸೆ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ


ರೇಣುಕಾ ಸ್ವಾಮಿ (ರೇಣುಕಾಸ್ವಾಮಿ ) ಕೊಲೆ ಕೇಸ್ ನಲ್ಲಿ E1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಲಾಯಿತು ಮಧ್ಯಂತರ ಜಾಮೀನು ಎಂದು ಪವಿತ್ರಾ ಅವರು ಕೋರ್ಟ್‌ನಲ್ಲಿ ಕೋರಿದ್ದರು. ಆದರೆ, ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್ ಶಿಪ್ ನಲ್ಲಿ ಇದ್ದ ಬಗ್ಗೆ ಚಾರ್ಜ್ ಶಿಟ್ ನಲ್ಲಿ ಉಲ್ಲೇಖಿಸಲಾಗಿದೆ. ಪವಿತ್ರಾಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಕಿರುಕುಳ ನೀಡಿದ್ದ. ಈ ವಿಷಯ ದರ್ಶನ್ ಕಿವಿಗೂ ಬಿತ್ತು. ಹೀಗಾಗಿ, ಆತನನ್ನು ಬೆಂಗಳೂರಿಗೆ ಕರೆಸಿ, ಪಟ್ಟಣಕ್ಕೆರೆ ಶೆಡ್‌ನಲ್ಲಿ ಆತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಈ ವೇಳೆ ಪವಿತ್ರಾ ಗೌಡ ಕೂಡ ಸ್ಥಳದಲ್ಲಿ ಇಬ್ಬರು ಮತ್ತು ಹಲ್ಲೆ ನಡೆಸಿದ್ದರು ಎಂದು ದರ್ಶನ್ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ದರ್ಶನ್ ಎ2 ಆಗಿದ್ದಾರೆ. ಪವಿತ್ರಾಗೆ ಇರೋದು ಎಂದರೆ ಮಗಳು ಮಾತ್ರ. ಅವಳಿಗೆ ಪರೀಕ್ಷೆ ಸಮೀಪಿಸಿದೆ. ಹೀಗಾಗಿ, 25 ದಿನಗಳ ಮಧ್ಯಂತರ ಜಾನು ನೀಡಿ ಎಂದು ಕೋರ್ಟ್‌ಗೆ ಮನವಿ ಮಾಡಿದರು. ಆದರೆ, ಇದನ್ನು ಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಲಾಗಿದೆ.

ಇದನ್ನೂ ಓದಿ: ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಎಚ್.ಡಿ

ಈ ಮೊದಲು ಪವಿತ್ರಾ ಅವರು ಮನೆಗೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು. ನಂತರ ಇದನ್ನು ರದ್ದುಗೊಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *