Headlines

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ

ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ


ಬೆಂಗಳೂರು, (ಫೆಬ್ರವರಿ 23): ತರಕಾರಿಗಳು (ತರಕಾರಿಗಳು) ಆರೋಗ್ಯಕ್ಕೆ ಪ್ರಯೋಜನದ ಜೊತೆಗೆ ಕೆಲವು ಅಡ್ಡ ಪರಿಣಾಮವನ್ನೂ ಉಂಟು ಮಾಡುತ್ತವೆ. ಹೌದು… ಕರ್ನಾಟಕ ತರಕಾರಿಗಳಲ್ಲಿ ಭಾರೀ ಲೋಹ ಹಾಗೂ ಕೀಟನಾಶಕಗಳ ಅಂಶವು ಕಂಡುಬಂದಿದೆ, ಹಿಂದಿನ ವರದಿಯು ಮತ್ತೊಮ್ಮೆ ದೃಢಪಟ್ಟಿದೆ. CPCB ಸಮಿತಿಯ FSSAI-ಮಾನ್ಯತೆ ಪಡೆದ ಪ್ರಯೋಗಾಲಯ ಪರೀಕ್ಷೆಯಲ್ಲಿ, 72 ಮಾದರಿಗಳಲ್ಲಿ 19 ಸೀಸದ ಅಂಶದ ಮಿತಿ ಮೀರಿದೆ. ಕೆಲವು ತರಕಾರಿಗಳಲ್ಲಿ 20 ಪಟ್ಟು ಹೆಚ್ಚು ಸೀಸ, ನಿಶಿದ್ಧ ಕೀಟನಾಶಕಗಳು ಇವೆ.

ಈ ಬಗ್ಗೆ ಆಹಾರ ತಜ್ಞೆ ಕೀರ್ತಿ ಹಿರಿಸಾವೆ ಮಾತನಾಡಿ, ಬೆಂಗಳೂರು ನಗರಕ್ಕೆ ವಿವಿಧ ಕಡೆ ತರಕಾರಿಗಳಿಂದ ಬರುತ್ತೆ. FSSAI ವರದಿ ಪ್ರಕಾರ ಕಲುಷಿತವಾಗಿರುವುದು ಕಂಡು ಬಂದಿದೆ.ಬೆಂಗಳೂರಿಗೆ ಬೇರೆ ಬೇರೆ ಕಡೆಯಿಂದ ತರಕಾರಿಗಳು ಬರುತ್ತವೆ. ತರಕಾರಿಗಳಲ್ಲಿ ಸೀಸದ ಪ್ರಮಾಣ ಹೆಚ್ಚಾಗಿರುತ್ತೆ . ಕೆಲವು ತರಕಾರಿಗಳಲ್ಲಿ ಕಡಿಮೆ ಇರುತ್ತೆ. ತಿನ್ನೋ ಅನ್ನವನ್ನು ಗೊಂದಲದಲ್ಲಿ ತಿನ್ನಬಾರದು. ಕೆಲವು ಪೆಷ್ಠಿಸೈಟ್, ಫರ್ಟಿಲಿಸರ್ಸ್ ಜಾಸ್ತಿ ಹಾಕಿದಾಗ ಮೆಟಲ್ ಪ್ರಮಾಣ ಹೆಚ್ಚಾಗಬಹುದು.ಇಂಡಸ್ಟ್ರೀಯಲ್ ವೆಸ್ಟ್ ನಿಂದ ಮೆಟಲ್ ಪ್ರಮಾಣ ಹೆಚ್ಚಾಗಬಹುದು.ಇಂಡಸ್ಟ್ರೀಯಲ್ ವೆಸ್ಟ್ ಗಳ ನದಿಗೆ ಕೆರೆ, ಹರಿ ಬಿಡೋದ್ರಿಂದ ಜಾಸ್ತಿ ಆಗುತ್ತೆ. ಕಲುಷಿತ ನೀರನ್ನ ತರಕಾರಿಗಳಿಗೆ ಹಾಕಿದಾಗ ಈ ರೀತಿ ಆಗುತ್ತೆ. ತರಕಾರಿಗಳಿಗೆ ಸರಿಯಾದ ನೀರನ್ನ ಹಾಕಬೇಕು. ಗಲೀಜು ನೀರು ಸೇರ್ಕೊಂಡಾಗ ಮೆಟಲ್ ಪ್ರಮಾಣ ಹೆಚ್ಚಾಗಬಹುದು. ಆಹಾರದಲ್ಲಿ ಹೆಚ್ಚಾಗಿ ಪ್ರಮಾಣ ಕಂಡು ಬರುತ್ತೆ. ಕಲುಷಿತ ನೀರಿನಿಂದಲೇ ಈ ರೀತಿಯ ಅಂಶ ಕಂಡು ಬರುತ್ತೆ ಎಂದು ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಸೀಸದ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?



Source link

Leave a Reply

Your email address will not be published. Required fields are marked *