
ಗುವಾಹಟಿ, ಮಾರ್ಚ್ 13: ರೈತರಿಗೆಂದು ಕೇಂದ್ರ ಸರ್ಕಾರ ರೂಪಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (ಪಿಎಂ ಕಿಸಾನ್ ಯೋಜನೆ) 22ನೇ ಕಂತಿನ ಹಣ ಇಂದು ಶುಕ್ರವಾರ ಬಿಡುಗಡೆಯಾಗುತ್ತಿದೆ. ಅಸ್ಸಾಂ ರಾಜಧಾನಿಯಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಹಣ ಬಿಡುಗಡೆ ಮಾಡಲಿದ್ದಾರೆ. 9 ಕೋಟಿಗೂ ಅಧಿಕ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂ ಹಣ ನೇರವಾಗಿ ಜಮೆಯಾಗಲಿದೆ.
ತಮಿಳುನಾಡಿನ ಕೊಯಮತ್ತೂರಿನಲ್ಲಿ 2025ರ ನವೆಂಬರ್ 19ರಂದು 21ನೇ ಕಂತಿನ ಹಣ ಬಿಡುಗಡೆ ಆಗುತ್ತಿದೆ. 9 ಕೋಟಿಗೂ ಅಧಿಕ ರೈತರಿಗೆ ಒಟ್ಟು 18,000 ಕೋಟಿ ರೂಪಾಯಿ ಹಣವನ್ನು ನೇರವಾಗಿ ಕೊಡಲಾಗಿದೆ. ಅದಕ್ಕೂ ಹಿಂದಿನ 20ನೇ ಕಂತಿನ ಹಣವನ್ನು ಆಗಸ್ಟ್ ತಿಂಗಳಿನಲ್ಲಿ 9.8 ಕೋಟಿ ರೈತರಿಗೆ ನೀಡಲಾಗಿದೆ.
ಇದನ್ನೂ ಓದಿ: ಫೆಬ್ರುವರಿ 2026ರಲ್ಲಿ ರೀಟೇಲ್ ಹಣದುಬ್ಬರ ಶೇ. 3.21ಕ್ಕೆ ಏರಿಕೆ; ಆರ್ಬಿಐ ಮಿತಿಯಲ್ಲಿ ಬೆಲೆ ಏರಿಕೆ
ಈ ಬಾರಿ ಹಲವು ಲಕ್ಷ ಸದಸ್ಯರ ಸಂಖ್ಯೆ ಇಳಿಕೆ
ಕಳೆದ ಮೂರು ತಿಂಗಳಲ್ಲಿ ಸರ್ಕಾರ ಪಿಎಂ ಕಿಸಾನ್ ಯೋಜನೆಗಳಿಗೆ ಮರು-ಕೆವೈಸಿ ಮಾಡಲು ತಿಳಿಸಿತ್ತು. ಕೆವೈಸಿ ಅಪ್ಡೇಟ್ ಮಾಡಲು ಮೂರ್ನಾಲ್ಕು ಮಾರ್ಗಗಳಿಗೆ ಆಫರ್ ಕೊಡಲಾಗಿದೆ. ಸಮೀಪದ ರೈತ ಸಂಪರ್ಕ ಕೇಂದ್ರ, ಪಿಎಂ ಕಿಸಾನ್ ಮೊಬೈಲ್ ಆಯಪ್, ಪಿಎಂ ಕಿಸಾನ್ ವೆಬ್ಸೈಟ್ನಲ್ಲಿ ಕೆವೈಸಿ ಅಪ್ಡೇಟ್ ಮಾಡಬಹುದು. ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದು, ಈ ಹಿಂದೆ ಎಲ್ಲಾ ಕಂತುಗಳನ್ನು ಪಡೆದಿರುವ ಫಲಾನುಭವಿಗಳು ರೀ-ಕೆವೈಸಿ ಮಾಡಿದರೆ 22ನೇ ಕಂತಿನ ಹಣ ಸಿಗುವುದಿಲ್ಲ. ವರದಿಗಳ ಪ್ರಕಾರ, ಈ ಬಾರಿ 22ನೇ ಕಂತಿನ ಹಣದಿಂದ ವಂಚಿತರಾಗುವ ಫಲಾನುಭವಿಗಳ ಸಂಖ್ಯೆ ಹಲವು ಲಕ್ಷಗಳೆನ್ನಲಾಗಿದೆ.
ಈ ಕೆಳಗಿನವುಗಳಿಗೆ ಸಿಗೋದಿಲ್ಲ ಹಣ
ಈಕೆವೈಸಿ ಅಪ್ಡೇಟ್ ಮಾಡದಿದ್ದವರಿಗೆ ಪಿಎಂ ಕಿಸಾನ್ ಹಣ ಸಿಕ್ಕೋದಿಲ್ಲ. ಫಲಾನುಭವಿಗಳ ಕುಟುಂಬದಲ್ಲಿ ಯಾರಾದರೂ ಕೂಡ ಸರ್ಕಾರಿ ಅಧಿಕಾರಿಯೋ, ಶಾಸಕರೋ, ಸಂಸದರೋ, ಜಿಪಂ ಸದಸ್ಯರೋ, ವೃತ್ತಿಪರರೋ, ಐಟಿ ಪಾವತಿದಾರರೋ ಇದ್ದರೆ ಅಂತಹವರು ರೈತರಾಗಿದ್ದಾಗ್ಯೂ ಯೋಜನೆಗೆ ಅರ್ಹರಾಗಿದ್ದಾರೆ.
ಇದನ್ನೂ ಓದಿ: ಪೆಟ್ರೋಲ್, ಎಲ್ ಪಿಜಿ ಕೊರತೆ ಇಲ್ಲ: ಸಂಸತ್ ನಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
ಮತ್ತೊಂದು ಗಮನಾರ್ಹ ಸಂಗತಿ ಎಂದರೆ 2019ರ ಫೆಬ್ರುವರಿ 1ರ ನಂತರ ಜಮೀನು ಮಾಲಕತ್ವ ಪಡೆದ ರೈತರಿಗೆ ಪಿಎಂ ಕಿಸಾನ್ ಹಣ ಸಿಕ್ಕಿಲ್ಲ. ಒಂದೇ ಕುಟುಂಬದ ಇಬ್ಬರು ಸದಸ್ಯರು ಪ್ರತ್ಯೇಕ ಜಮೀನು ಮಾಲಕತ್ವ ಹೊಂದಿದ್ದರೂ ಒಬ್ಬರು ಮಾತ್ರವೇ ಯೋಜನೆಗೆ ಅರ್ಹರಾಗಿರುವುದು.
ಪಿಎಂ ಕಿಸಾನ್ ಯೋಜನೆ ಅಧಿಕೃತ ವೆಬ್ಸೈಟ್ ಲಿಂಕ್: pmkisan.gov.in/
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ