ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ

ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ



ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ
<p>ನವದೆಹಲಿ: 2025ರ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಬದ್ದ ಎದುರಾಳಿ ಪಾಕಿಸ್ತಾನವನ್ನು ಭಾರತ ಬಗ್ಗುಬಡಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ, ನೆರೆಯ ಪಾಕಿಸ್ತಾನವನ್ನು ಕಾಲೆಳೆದಿದ್ದಾರೆ. ಈ ಮೂಲಕ ಸೋತ ಪಾಕ್ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ.</p><img><p>2025ರ ಏಷ್ಯಾಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವ ಮೂಲಕ ಒಂಬತ್ತನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.</p><img><p>ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ತಿಲಕ್ ವರ್ಮಾ ಆಕರ್ಷಕ ಬ್ಯಾಟಿಂಗ್ ಹಾಗೂ ಕುಲ್ದೀಪ್ ಯಾದವ್ ಮಿಂಚಿನ ದಾಳಿಯ ನೆರವಿನಿಂದ ಟೀಂ ಇಂಡಿಯಾ 5 ವಿಕೆಟ್ ಅಂತರದ ಜಯ ಸಾಧಿಸುವ ಮೂಲಕ ಏಷ್ಯಾಕಪ್ ಟ್ರೋಫಿ ಗೆದ್ದು ಬೀಗಿದೆ.</p><img><p>ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನ ಎದುರು ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ತಮಗೆ ಪಾಕ್ ಯಾವ ವಲಯದಲ್ಲೂ ಸರಿಸಾಟಿಯಲ್ಲ ಎನ್ನುವ ಸ್ಪಷ್ಟ ಸಂದೇಶ ರವನಿಸಿದೆ.</p><img><p>ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಇದರ ಜತೆಗೆ ಪಾಕ್‌ನ ಕಾಲೆಳೆದಿದ್ದಾರೆ.</p><img><p>ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂದೂರ. ಫಲಿತಾಂಶ ಒಂದೇ – ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು’ ಎಂದಿದ್ದಾರೆ.</p><img><p>ಪಾಕ್ ಪ್ರೇರಿತ ಉಗ್ರರು ನಡೆಸಿದ ಪೆಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತ ಕಳೆದ ಮೇ 6-7ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬೇರೂರಿದ್ದ 9 ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಚರಣೆ ಮಾಡಿ, ಉಗ್ರನೆಲೆಗಳನ್ನು ಧ್ವಂಸಗೊಳಿಸಿತ್ತು.</p><img><p>ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಭಾರತದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.</p>



Source link

Leave a Reply

Your email address will not be published. Required fields are marked *