ಉಡುಪಿ (ನವೆಂಬರ್ 28): ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಕರಾವಳಿಯ ಪುಣ್ಯಭೂಮಿ ಉಡುಪಿಗೆ (ಉಡುಪಿ) ಆಗಮಿಸಿ ಕೃಷ್ಣದರ್ಶನ ಮಾಡಿದ ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ‘ಭಾರತ ಭಾಗ್ಯವಿದಾತ’ ಬಿರುದು ನೀಡಿ ಸನ್ಮಾನಿಸಿದ್ದಾರೆ. ಲಕ್ಷಕಂಠ ಪಾರಣದಲ್ಲಿ ಭಾಗವಹಿಸಿ 7 ನಿಮಿಷಗಳ ಕಾಲ ಶ್ಲೋಕ ಪಠಣ ಮಾಡಿದ ನರೇಂದ್ರ ಮೋದಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಹಲವು ವಿಚಾರಗಳ ಬಗ್ಗೆ ವಿವರ ನೀಡಿದರು. ಜೈ ಶ್ರೀಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಉಡುಪಿ ಪಾತ್ರವನ್ನು ಪ್ರಸ್ತಾಪಿಸಿದ್ದು, ವಿಶ್ವೇಶ ಸ್ವಾಮೀಜಿ ತೀರ್ಥ ರಾಮ ಮಂದಿರ ಆಂದೋಲನ ನಡೆಸಿದ್ದು ವಿಶ್ವ ಅರಿತಿದೆ.ಅಯೋಧ್ಯೆಯಿಂದ ಉಡುಪಿವರೆಗೆ ಅಸಂಖ್ಯ ಮಠಾಧೀಶ ರಾಮ ಭಕ್ತರು ಇದ್ದಾರೆ.
ಉಡುಪಿಯನ್ನು ಕೊಂಡಾಡಿದ ಮೋದಿ
ನನ್ನ ಜನನ ಗುಜರಾತ್ ನಲ್ಲಿ ಆಗಿದ್ದರೂ ಉಡುಪಿ ಜೊತೆ ಅವಿನಾಭಾವ ಸಂಬಂಧವಿದೆ. ಉಡುಪಿಗೆ ಇಂದು ಭೇಟಿ ನೀಡಿದ್ದು ವಿಶಿಷ್ಟ ಅನುಭೂತಿ. ನಾನು ದ್ವಾರಕೆಯಲ್ಲಿ ಹೋಗಿ ಶ್ರೀಕೃಷ್ಣನ ದರ್ಶನ ಪಡೆದಿದ್ದೆ. ಉಡುಪಿಗೆ ಬರುವುದು ಅಂದ್ರೆ ನನಗೆ ಬಹಳ ವಿಶೇಷ. ಹಿಂದೆ ಪಟ್ಟಿತಾ ಅಭಿಯಾನದಲ್ಲಿ ಉಡುಪಿ ಮೊದಲ ಸ್ಥಾನ ಬಂದಿತ್ತು ಉಡುಪಿ ಭಾರತೀಯ ಜನತಾ ಪಕ್ಷದ ಕರ್ಮಭೂಮಿಯಾಗಿದೆ. ಬಿಜೆಪಿಗೆ ದಿವಂಗತ ವಿ.ಎಸ್.ಆಚಾರ್ಯರ ಕೊಡುಗೆಸಾಕಷ್ಟಿದೆ. ಕಲಿಯುಗದಲ್ಲಿ ಭಗವಂತನ ನಾಮಸ್ಮರಣೆಯಿಂದ ಮೋಕ್ಷ ಸಾಧ್ಯ. ಲಕ್ಷ ಕಂಠ ಗೀತಾ ಪಾರಾಯಣ ನಮಗೆ ಹೊಸ ಶಕ್ತಿ ನೀಡುತ್ತಿದೆ. ಇಂದು ವಿಶೇಷವಾಗಿ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ನಮಿಸುತ್ತೇನೆ. ಲಕ್ಷ ಕಠ ಗೀತಾ ಪಾರಾಯಣವನ್ನು ಇಂದು ಸಾಕಾರಗೊಳಿಸಿದ್ದಾರೆ ಎಂದು ಉಡುಪಿಯನ್ನು ಕೊಂಡಾಡಿದರು.
ಇದನ್ನೂ ನೋಡಿ: ಉಡುಪಿಯಲ್ಲಿ ಪ್ರಧಾನಿ ಮೋದಿ: ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ
ಭಗವದ್ಗೀತೆಯೊಂದಿಗೆ ಮುಂದಿನ ಪೀಳಿಗೆಯನ್ನು ಜೋಡಿಸುವ ಪ್ರಯತ್ನವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಧರ್ಮ ಧ್ವಜದ ಸ್ಥಾಪನೆಯಾಗಿದೆ. ಅಯೋಧ್ಯೆಯಿಂದ ಉಡುಪಿವರೆಗೆ ಅಸಂಖ್ಯ ಸಂಖ್ಯೆಯಲ್ಲಿ ರಾಮ ಭಕ್ತರು ಇದರೊಂದಿಗೆ ಸೇರಿದ್ದಾರೆ. ವಿಶ್ವೇಶ ತೀರ್ಥ ಸ್ವಾಮೀಜಿ ರಾಮ ಮಂದಿರ ಆಂದೋಲನ ನಡೆಸಿದ್ದು ವಿಶ್ವ ಅರಿತಿದೆ. ರಾಮ ಮಂದಿರದ ಒಂದು ದ್ವಾರಕ್ಕೆ ಮಧ್ವಾಚಾರ್ಯರ ಹೆಸರು ಉಡುಪಿ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ವಿಷಯ. ಪುರಂದರ ದಾಸರು, ಕನಕದಾಸರು ದಾಸ ಪರಂಪರೆಯನ್ನು ಕನ್ನಡ ಭಾಷೆಯಲ್ಲಿ ಜನರ ಬಳಿಗೆ ಕೊಂಡೊಯ್ದರು. ಇಂದು ಉಡುಪಿಯಲ್ಲಿ ಕಿಂಡಿಯ ಮೂಲಕ ಭಗವಾನ್ ಶ್ರೀಕೃಷ್ಣನ ದರ್ಶನವಾಯಿತು. ಕನಕದಾಸರಿಗೆ ನಮನ ಸಲ್ಲಿಸುವ ಅವಕಾಶ ಸಿಕ್ಕಿತು.
ಪಾಕ್ಗೆ ಪರೋಕ್ಷ ಎಚ್ಚರಿಕೆ
ಪೆಹಲ್ಗಾಮ್ ದುರಂತದಲ್ಲಿ ಕರ್ನಾಟಕದ ಸಹೋದರರೂ ಜೀವ ತೆತ್ತರು.ಈ ಹಿಂದಿನ ಸರ್ಕಾರಗಳು ಉಗ್ರ ಕೃತ್ಯಗಳಾಗಿ ಸುಮ್ಮನಿದ್ದವು. ಆದರೆ, ನಾವು ಕೈ ಕಟ್ಟಿ ಕುಳಿತುಕೊಳ್ಳಲಿಲ್ಲ. ಆಪರೇಷನ್ ಸಿಂಧೂರ ಮೂಲ ತಕ್ಕ ಉತ್ತರ ಕೊಟ್ಟರು. ಈ ಮೂಲಕ ಭಯೋತ್ಪಾದನೆ ಕೃತ್ಯವನ್ನು ಸಹಿಸುವುದಿಲ್ಲ ಎಂದು ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ಹವಾ: ರೋಡ್ ಶೋ, ಗೀತಾ ಪಾರಾಯಣ, ಕನಕನ ಕಿಂಡಿಯ ಸ್ವರ್ಣ ಕವಚ ಲೋಕಾರ್ಪಣೆ
ಒಂಭತ್ತು ನವ ಸಂಕಲ್ಪ ಮಾಡುವಂತೆ ಮೋದಿ ಕರೆ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ನವ ಸಂಕಲ್ಪ ಮಾಡುವಂತೆ ಮನವಿ ಮಾಡಿದರು. ಎಲ್ಲರೂ ಈ ಒಂಭತ್ತು ಸಂಕಲ್ಪ ಮಾಡಿ ವರ್ತಮಾನ ಮತ್ತು ಭವಿಷ್ಯಕ್ಕಾಗಿ ಇವುಗಳನ್ನು ಒತ್ತಿ ಒತ್ತಿ ಹೇಳಿದರು. ಹಾಗದ್ರೆ, ಮೋದಿ ಹೇಳಿದ 9 ಸಂಕಲ್ಪಗಳೇನು ಈ ಕೆಳಗಿನಂತಿವೆ ನೋಡಿ.
- ಮೊದಲ ಸಂಕಲ್ಪ: ಜಲಸಂರಕ್ಷಣೆ ಮಾಡುವುದು.
- ಎರಡನೇ ಸಂಕಲ್ಪ: ಮರ ಬೆಳೆಸುವುದು, ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ.
- ಮೂರನೇ ಸಂಕಲ್ಪ: ಕನಿಷ್ಠ ಒಬ್ಬ ಬಡವನ ಜೀವನವನ್ನು ಸುಧಾರಿಸಿ.
- ನಾಲ್ಕನೇ ಸಂಕಲ್ಪ: ಸ್ವದೇಶಿ ಅಳವರಿಸಿಕೊಳ್ಳಿ, ವೂಕಲ್-ಲೋಕಲ್ ಮಂತ್ರ ನಮ್ಮದಾಗಲಿದೆ.
- ಐದನೇ ಸಂಕಲ್ಪ: ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಿ.
- ಆರನೇ ಸಂಕಲ್ಪ: ಆರೋಗ್ಯ ಪೂರ್ಣ ಜೀವನ ಶಥಲಿ ಅವಳವಡಿಸಿಕೊಳ್ಳೋಣ, ಊಟದಲ್ಲಿ ಎಣ್ಣೆ ಕಡಿಮೆ ಮಾಡೋಣ. ಸಿರಿಧಾನ್ಯ ಬಳಸೋಣ.
- ಏಳನೇ ಸಂಕಲ್ಪ: ಯೋಗ ಅಳವಡಿಸಿಕೊಳ್ಳಿ, ಎಲ್ಲರೂ ಯೋಗಿಗಳಾಗಿ.
- ಎಂಟನೇ ಸಂಕಲ್ಪ: ಹಸ್ತಪ್ರತಿ ಸಂರಕ್ಷಣೆಗೆ ಕೊಡುಗೆ ನೀಡಿ.
- ಒಂಭತ್ತನೇ ಸಂಕಲ್ಪ: ದೇಶದ ಕನಿಷ್ಠ 25 ಪುಣ್ಯಕ್ಷೇತ್ರಗಳ ದರ್ಶನ ಮಾಡುತ್ತೇನೆ ಎಂಬ ಸಂಕಲ್ಪ ಮಾಡಿ.