ಉಡುಪಿ ಶ್ರೀ ಕೃಷ್ಣ ದೇವರು ಹಾಗೂ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಉಡುಪಿ, ನವೆಂಬರ್ 26: ಉಡುಪಿ ಶ್ರೀ ಕೃಷ್ಣ ಮಠಕ್ಕೆ (ಉಡುಪಿ ಶ್ರೀಕೃಷ್ಣ ಮಠ) ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ನವೆಂಬರ್ 28 ರಂದು ವಿವಿಧ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶವನ್ನು ಹೊರಡಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಸೆಕ್ಷನ್ 163 ಅನ್ವಯ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಪ್ರಧಾನ ಮಂತ್ರಿಗಳ ಸಂಚಾರ ಭೇಟಿ ಪ್ರದೇಶದ ಭದ್ರತಾ ಪ್ರವಾಸ ವ್ಯವಸ್ಥೆ ಮತ್ತು ಹೆಲಿಪ್ಯಾಡ್ ವಠಾರ ಮತ್ತು ಶ್ರೀ ಕೃಷ್ಣ ಮಠ ವಠಾರ ಹಾಗೂ ಶ್ರೀ ಕೃಷ್ಣ ಮಂದಿರದ ಸುತ್ತಮುತ್ತ ಇರುವ ಅಂಗಡಿ–ಮುಂಗಟ್ಟುಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಇದೇ ರೀತಿ ಪ್ರಧಾನಿ ಸಂಚರಿಸುವ ಮಾರ್ಗದ ಎರಡೂ ಬದಿಯ ಅಂಗಡಿಗಳನ್ನು ನವೆಂಬರ್ 28 ರ ಬೆಳಿಗ್ಗೆ 9 ಗಂಟೆಯಿಂದ 3 ಗಂಟೆಯವರೆಗೆ ಮುಚ್ಚುವಂತೆ ನಿರ್ದೇಶಿಸಲಾಗಿದೆ.
ಡ್ರೋನ್ ಹಾರಾಟ ನಿಷೇಧ
ನವೆಂಬರ್ 26 ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿ.ಮೀ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ‘ನೋ ಫ್ಲೈ ಜೋನ್’ ಎಂದು ಘೋಷಿಸಲಾಗಿದೆ.
ಸಾರ್ವಜನಿಕರಿಗೆ ಏನೇನು ನಿರ್ಬಂಧ?
ಪ್ರಧಾನಿಯ ವೀಕ್ಷಣೆಗೆ ಬರುವ ಸಾರ್ವಜನಿಕರು ಬ್ಯಾಗ್, ನೀರಿನ ಬಾಟಲ್, ಧ್ವಜ, ಸ್ಟಿಕರ್, ಬಲೂನು, ಪಟಾಕಿ, ಲೂಸ್ ಪಾಲಿಥಿನ್ ವಸ್ತುಗಳನ್ನು ತರದಂತೆ ಸೂಚಿಸಲಾಗಿದೆ. ಆದೇಶ ಉಲ್ಲಂಘನೆ ಮಾಡಿದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಉಡುಪಿಗೆ ಬರುತ್ತಿರೋದೇಕೆ ಪ್ರಧಾನಿ ಮೋದಿ?
ಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಡೆಯುವ ಲಕ್ಷಕಂಠ ಗೀತೆ ಪಾರಾಯಣದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ಮೋದಿ ಉಡುಪಿಗೆ ಆಗಮಿಸುತ್ತಿದ್ದಾರೆ. ನವೆಂಬರ್ 28ರಂದು ಬೆಳಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ.
ಇದನ್ನೂ ಓದಿ: ನ.28ರಂದು ಉಡುಪಿಯಲ್ಲಿ ಮೋದಿ ರಸ್ತೆ ಶೋ ರದ್ದು; ಪ್ರಧಾನಿ ಭೇಟಿಯ ಬಗ್ಗೆ ಇಲ್ಲಿದೆ
ಪ್ರಧಾನಿ ಮೋದಿ ಅವರು ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ ಲಕ್ಷಕಂಠ ಗೀತೆ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಭಗವದ್ಗೀತೆಯ 10 ಶ್ಲೋಕಗಳನ್ನು ಕೂಡ ಅವರು ಪಠಿಸಲಿದ್ದಾರೆ. ಈ ಧಾರ್ಮಿಕ ಉತ್ಸವದಲ್ಲಿ ಒಂದು ಲಕ್ಷ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ