ತೇಜಸ್ವಿ ಸೂರ್ಯ, ಅಣ್ಣಾಮಲೈ ಮತ್ತು ಪ್ರಧಾನಿ ಮೋದಿ
ನವಂಬರ್, (ನವೆಂಬರ್ 09): ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (ತೇಜಸ್ವಿ ಸೂರ್ಯ) ಅವರು ಸತತ 2ನೇ ವರ್ಷವೂ ಗೋವಾದಲ್ಲಿ ನಡೆದ ಐರನ್ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ಬಾರಿ ತೇಜಸ್ವಿ ಸೂರ್ಯ ಜೊತೆಗೆ ಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಅಣ್ಣಾಮಲೈ ಭಾಗವಹಿಸಿದ್ದು, ಅವರೂ ಸಹ ಈ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಪ್ರತಿಕ್ರಿಯೆ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವಿಟರ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಗೋವಾದಲ್ಲಿ ನಡೆದ ಐರಾನ್ಮ್ಯಾನ್ 70.3 ಓಟದಲ್ಲಿ ನಮ್ಮ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದನ್ನು ನೋಡಿ ಸಂತೋಷವಾಯಿತು. ಇಂತಹ ಕಾರ್ಯಕ್ರಮಗಳು #FitIndia ಆಂದೋಲನಕ್ಕೆ ಕೊಡುಗೆ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಈ ಐರನ್ಮ್ಯಾನ್ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿದ್ದಾರೆ ಎಂದು ಸಂತೋಷವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಯುವ ನಾಯಕರಲ್ಲಿ ಮತ್ತಷ್ಟು ಉತ್ಸಾಹ ತುಂಬಿದ್ದಾರೆ.
ಇಂದು ಗೋವಾದಲ್ಲಿ ನಡೆದ ಐರನ್ಮ್ಯಾನ್ 70.3 ನಂತಹ ಕಾರ್ಯಕ್ರಮಗಳಲ್ಲಿ ನಮ್ಮ ಯುವಕರು ಹೆಚ್ಚಿದ ಭಾಗವಹಿಸುವಿಕೆಯನ್ನು ನೋಡಿ ಸಂತೋಷವಾಯಿತು. ಅಂತಹ ಘಟನೆಗಳು ಇದಕ್ಕೆ ಕೊಡುಗೆ ನೀಡುತ್ತವೆ #FitIndia ಚಳುವಳಿ. ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ನಮ್ಮ ಇಬ್ಬರು ಯುವ ಪಕ್ಷದ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಅವರಿಗೆ ಸಂತೋಷವಾಯಿತು… pic.twitter.com/L2fn6Tf6W9
– ನರೇಂದ್ರ ಮೋದಿ (@narendramodi) ನವೆಂಬರ್ 9, 2025
ಇದನ್ನೂ ಓದಿ: ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್ಮ್ಯಾನ್ ಓಟದಲ್ಲಿ ಸಾಧನೆ: ಅಣ್ಣಾಮಲೈ ಕೂಡ ಭಾಗಿ
ಈ ವರ್ಷದ ಐರನ್ಮ್ಯಾನ್ನಲ್ಲಿ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (ಅಣ್ಣಾಮಲೈ) ಸಹ ಭಾಗವಹಿಸಿದ್ದು ವಿಶೇಷ. ಸಂಸದ ಸೂರ್ಯ ಅವರು ಸ್ಪರ್ಧೆಯ ಮೂರು ಕಠಿಣ ಹಂತಗಳಲ್ಲಿ 1.9 ಕಿ.ಮೀಜು, 90 ಕಿ.ಮೀ ಸೈಕ್ಲಿಂಗ್, ಮತ್ತು 21.1 ಕಿ.ಮೀ ಓಟವನ್ನು 7 ಗಂಟೆ 49 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದಾರೆ. ಈಜಲು ಸುಮಾರು 44 ನಿಮಿಷ, ಸೈಕ್ಲಿಂಗ್ಗೆ 3 ಗಂಟೆ 47 ನಿಮಿಷ ಮತ್ತು ಓಟಕ್ಕೆ 2 ಗಂಟೆ 54 ನಿಮಿಷಗಳು ತೆಗೆದುಕೊಂಡರು. ಮತ್ತೊಂದೆಡೆ, ಅಣ್ಣಾಮಲೈ ಅವರು ಈ ಓಟವನ್ನು 8 ಗಂಟೆ 13 ನಿಮಿಷಗಳಲ್ಲಿ ಪೂರ್ಣಗೊಳಿಸಿದರು. ಇದೀಗ ಇವರ ಸಾಧನೆಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಓಟದ ನಂತರ ಮಾತನಾಡಿದ ತೇಜಸ್ವಿ ಸೂರ್ಯ, ’50ಕ್ಕೂ ಹೆಚ್ಚು ದೇಶಗಳ ತಜ್ಞರನ್ನು ಆಕರ್ಷಿಸುವ ಐರನ್ಮ್ಯಾನ್ 70.3 ಗೋವಾ (ಐರನ್ ಮ್ಯಾನ್ 70.3 ಗೋವಾ), ಭಾರತದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾಗಿ ನಡೆದಿದೆ. ಇದು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಅಂತಿಮ ಪರೀಕ್ಷೆಯಾಗಿದೆ. ಕಳೆದ ಕೆಲವು ತಿಂಗಳುಗಳಲ್ಲಿ ಸುಧಾರಿಸಲು ನಾನು ಕಠಿಣ ತರಬೇತಿ ಪಡೆದಿದ್ದೇನೆ, ಈ ಸವಾಲನ್ನು ಪೂರ್ಣಗೊಳಿಸಲು ಸಂತೋಷವಾಗಿದೆ.