ನವದೆಹಲಿ, ಫೆಬ್ರುವರಿ 22: ರಾಷ್ಟ್ರರಾಜಧಾನಿಯಲ್ಲಿ ಮತ್ತೊಂದು ಉಗ್ರ ದಾಳಿಗೆ ಸಂಚು (ಟೆರರ್ ಪ್ಲಾಟ್) ರೂಪಿಸಲಾಗುತ್ತಿದೆ ಎಂಬ ಗುಪ್ತಚರ ಮಾಹಿತಿ ಬರುತ್ತಿರುವ ಬೆನ್ನಲ್ಲೇ ಎಂಟು ಮಂದಿ ಶಂಕಿತರನ್ನು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಎಂಟು ಮಂದಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ ಆರು ಮಂದಿ ಶಂಕಿತರು ಬಂಧಿತರಾದರೆ, ಪಶ್ಚಿಮ ಬಂಗಾಳದಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡಿನಲ್ಲಿ ಬಂಧಿತರಾದ ಆರು ಮಂದಿ ಶಂಕಿತ ಉಗ್ರರನ್ನು ಮಿಜಾನುರ್ ರಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹೀದ್ ಮತ್ತು ಮೊಹಮ್ಮದ್ ಉಜ್ಜಲ್ ಎಂದು ಹೇಳಲಾಗಿದೆ. ಈ ಆರೋಪಗಳು ನಕಲಿ ಆಧಾರ್ ಕಾರ್ಡ್ ಅನ್ನು ಬಳಸಲಾಗಿದೆ. ಈ ಎಂಟು ಮಂದಿಯಲ್ಲಿ ಒಬ್ಬಾತ ಬಾಂಗ್ಲಾದೇಶದ ನಾಗರಿಕ ಅಗತ್ಯ.
ಇದನ್ನೂ ಓದಿ: ಮನ್ ಕಿ ಬಾತ್: AI ಇಂಪ್ಯಾಕ್ಟ್ ಸಮಿತಿ, ಡಿಜಿಟಲ್ ವಂಚನೆ ಸೇರಿದಂತೆ ಹಲವು ಅಂಶಗಳ ಉಲ್ಲೇಖಿತ ನಮೋ
ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿದ್ದು ದೆಹಲಿ ಪೊಲೀಸರಿಗೆ ಒಪ್ಪಿಸುತ್ತಿದ್ದಾರೆ. ಆರೋಪಿಗಳಿಂದ ಹತ್ತಕ್ಕೂ ಹೆಚ್ಚು ಮೊಬೈಲ್ ಫೋನ್ಗಳು ಮತ್ತು 16 ಸಿಮ್ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು?
ಕೆಂಪು ಕೋಟೆ ಮತ್ತು ದೇಶದ ವಿವಿಧೆಡೆಯ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಪಾಕಿಸ್ತಾನದ ಲಷ್ಕರೆ ತೈಬಾ ಸಂಘಟನೆ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ದೆಹಲಿ ಮಾಹಿತಿ ನೀಡಿದೆ. ಫೆಬ್ರುವರಿ 6ರಂದು ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಸಂಭವಿಸಿದ ಆತ್ಮಹತ್ಯಾ ದಾಳಿಗೆ ಪ್ರತೀಕಾರವಾಗಿ ಭಾರತದಲ್ಲಿ ಬಾಂಬ್ ದಾಳಿಗೆ ಸಂಚು ರೂಪಿಸಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಫೆ. 6 ಬಾಂಬ್ ದಾಳಿ ಘಟನೆಗೆ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೊಣೆ ಹೊತ್ತುಕೊಂಡಿದೆ. ಆದರೆ, ಭಾರತದ ಮೇಲೆ ಉಗ್ರರು ಪ್ರತೀಕಾರ ತೀರಿಸಿಕೊಳ್ಳಲು ಮುಂದಾದಂತಿದೆ.
ಇದನ್ನೂ ಓದಿ: ಭಾರತೀಯ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಪ್ರತೀಕವಾಗಬೇಕು; ಪ್ರಧಾನಿ ಮೋದಿ
ಮೂರು ತಿಂಗಳ ಹಿಂದೆ, ನವೆಂಬರ್ 10 ರಂದು ಕೆಂಪು ಕೋಟೆಯಲ್ಲಿ ಕಾರ್ ಬಾಂಬ್ ಸ್ಫೋಟಿಸಿ 12 ಮಂದಿಯನ್ನು ಬಲಿತೆಗೆದುಕೊಂಡಿದ್ದರು. ಅದೇ ರೀತಿಯ ಬಾಂಬ್ ದಾಳಿಗಳಿಗೆ ಪಾಕ್ ಪ್ರಚೋದಿತ ಉಗ್ರರು ಯೋಜಿಸಿದ್ದಾರೆ ಎಂಬುದು ಗುಪ್ತಚರರಿಗೆ ಸಿಕ್ಕಿರುವ ಮಾಹಿತಿ. ಇದೀಗ ಬಂಧಿತರಾಗಿರುವ ಶಂಕಿತ ಉಗ್ರರು ದೆಹಲಿ ಹಾಗೂ ಕೋಲ್ಕತಾದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾಶ್ಮೀರ ಕುರಿತ ಪೋಸ್ಟರ್ಗಳನ್ನು ಹಾಕುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಇವರ ಜಾಡು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ