Headlines

ಅಧಿಕಾರ ಹಂಚಿಕೆ ತಿಕ್ಕಾಟದ ನಡುವೆ ಕೈ ಶಾಸಕರ ವಿದೇಶ ಪ್ರವಾಸ: ಸಿದ್ದರಾಮಯ್ಯ ಆಪ್ತರೇ ಹೆಚ್ಚು, ಡಿಕೆ ಬಣದಲ್ಲಿ ಕಿಚ್ಚು!

ಅಧಿಕಾರ ಹಂಚಿಕೆ ತಿಕ್ಕಾಟದ ನಡುವೆ ಕೈ ಶಾಸಕರ ವಿದೇಶ ಪ್ರವಾಸ: ಸಿದ್ದರಾಮಯ್ಯ ಆಪ್ತರೇ ಹೆಚ್ಚು, ಡಿಕೆ ಬಣದಲ್ಲಿ ಕಿಚ್ಚು!


ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಶಾಸಕರುಚಿತ್ರದ ಕ್ರೆಡಿಟ್ ಮೂಲ: tv9

ಬೆಂಗಳೂರು, ಫೆಬ್ರವರಿ 18: ಕರ್ನಾಟಕ ಕಾಂಗ್ರೆಸ್ನಲ್ಲಿ (ಕಾಂಗ್ರೆಸ್) ನಾಯಕತ್ವ ಬದಲಾವಣೆ ಎಂಬ ಚರ್ಚೆಯೇ ಗೊಂದಲದ ಗೂಡಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಆಪ್ತ ಬಾಣದ ಬಹುಪಾಲು ಶಾಸಕರು (ಕಾಂಗ್ರೆಸ್ ಶಾಸಕರು) ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ. ಮೊದಲು ಸರ್ಕಾರಿ ಪ್ರಾಯೋಜಿತ ಎಂಬ ಅರ್ಥದಲ್ಲಿ ಹೊರಬಿದ್ದಿದ್ದ ಈ ಟೂರ್ ವಿಚಾರ, ಈಗ ಖಾಸಗಿ ಟ್ರಿಪ್ ಎಂಬುದು ಗೊತ್ತಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್ಸಿಗಳು ವಿದೇಶಕ್ಕೆ ಹಾರಿದ್ದಾರೆ.

ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಶಾಸಕರು ಯಾರೆಲ್ಲ?

  • ದೇವೇಂದ್ರಪ್ಪ, ಜಗಳೂರು ಶಾಸಕ
  • ಹೆಚ್.ಡಿ ತಮ್ಮಯ್ಯ, ಚಿಕ್ಕಮಗಳೂರು ಶಾಸಕರು
  • ಹಂಪನಗೌಡ ಬಾದರ್ಲಿ, ಸಿಂಧನೂರು ಶಾಸಕ
  • ಪುಟ್ಟರಂಗಶೆಟ್ಟಿ, ಚಾಮರಾಜನಗರ ಶಾಸಕ
  • ಬಿ.ಎಂ ನಾಗರಾಜ್, ಸಿರಗುಪ್ಪ ಶಾಸಕ
  • ಯಶವಂತರಾಯಗೌಡ ಪಾಟೀಲ, ಇಂಡಿ ಶಾಸಕ
  • ಎಸ್.ಎಸ್. ಮಲ್ಲಿಕಾರ್ಜುನ್, ಸಚಿವ
  • ಶರಣಗೌಡ ಬಯ್ಯಾಪುರ, ಎಂಎಲ್‌ಸಿ
  • ವಸಂತ್ ಕುಮಾರ್, ಎಂಎಲ್ಸಿ
  • ನಾಗರಾಜ್ ಯಾದವ್, ಎಂಎಲ್ಸಿ
  • ಡಾ. ಡಿ. ತಿಮಯ್ಯ, ಎಂಎಲ್ ಸಿ

ಮಲೇಶಿಯನ್ ಏರ್‌ಲೈನ್ಸ್‌ನ MH 193 ವಿಮಾನದಲ್ಲಿ ಶಾಸಕರು ತೆರಳಿದ್ದಾರೆ. ಆಸ್ಟ್ರೇಲಿಯಾಗೆ ನೇರ ವಿಮಾನ ಇಲ್ಲದ ಕಾರಣ ಟ್ರಾನ್ಸಿಟ್ ಫ್ಲೈಟ್ ಮೂಲಕ ತೆರಳಲು ಪ್ಲ್ಯಾನ್ ಮಾಡಲಾಗಿದೆ. ಬೆಂಗಳೂರಿನಿಂದ ಮಲೇಷ್ಯಾ ರಾಜಧಾನಿ ಕೌಲಾಲಂಪುರಕ್ಕೆ ತೆರಳುವ ಶಾಸಕರು, ಅಲ್ಲಿಂದ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುತ್ತಾರೆ.

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಹೋಗುವ ಶಾಸಕರು ಮಾರ್ಚ್ 1ರವರೆಗೆ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ. ವಿಚಾರ ಎಂದರೆ ಆರಂಭದಲ್ಲಿ 35 ಶಾಸಕರು ಸಿದ್ಧರಾಗಿದ್ದರು. ಬಳಿಕ ಶಾಸಕರ ಸಂಖ್ಯೆ 21ಕ್ಕೆ ಇಳಿದಿತ್ತು. ಆದರೆ ರಾತ್ರಿಯಾಗ್ತಿದ್ದಂತೆಯೇ 11 ಶಾಸಕರು ಮಾತ್ರ ವಿದೇಶಕ್ಕೆ ಹಾರಿದ್ದಾರೆ.

ಮತ್ತೊಂದೆಡೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಪತ್ನಿ ಹಾಗೂ ಜೊತೆಗೆ ಕೊಲಂಬಿಯಾಗೆ ತೆರಳಿದ್ದಾರೆ. ಮಂಗಳವಾರ ಬೆಳಗ್ಗೆ 7 ಸ್ನೇಹಿತರು, ಪತ್ನಿ, ಪತ್ನಿ ಜತೆ ಎಸ್ಎಸ್ ಮಲ್ಲಿಕಾರ್ಜುನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಥೈಲ್ಯಾಂಡ್‌ನ ಪುಕೆಟ್ ನಗರಕ್ಕೆ ತೆರದ್ದು, ಅಲ್ಲಿಂದ ದಕ್ಷಿಣ ಅಮೆರಿಕದ ಕೊಲಂಬಿಯಾಗೆ ಪ್ರಯಾಣ ಬೆಳೆಸಿದ್ದಾರೆ.

ಶಾಸಕರು ವಿದೇಶಕ್ಕೆ ತೆರಳುವ ಮುನ್ನ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಮಾಹಿತಿ ನೀಡಿದ್ದಾರೆ. ಅವರು ಏನೇ ಮಾಹಿತಿ ನೀಡಿದರೂ, ಖಾಸಗಿ ಟೂರ್ ಈಗ ಪೊಲಿಟಿಕಲ್ ಟೂರ್ ಎಂಬ ರೀತಿಯ ಬಿಂಬಿತವಾಗಿದೆ. ಕಾರಣ, ಶಾಸಕರೆಲ್ಲ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲೇ ಪ್ರವಾಸ ಹೊರಟಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ವೆಂಕಟೇಶ್, ನಾನು ವಿದೇಶಕ್ಕೆ ಹೋಗುತ್ತಿಲ್ಲ. ಶಾಸಕರನ್ನು ವಿದೇಶಕ್ಕೆ ಕಳುಹಿಸಲು ನಾನೇನು ಸಿಎಂ ಆಗಬೇಕಾ ಎಂದು ಪ್ರಶ್ನಿಸಿದ್ದಾರೆ. ಹಾಗಾದರೆ, ಸಿಎಂ ಸ್ಥಾನದಲ್ಲಿರುವವರು ಫಾರಿನ್‌ಗೆ ಕಳುಹಿಸುತ್ತಿದ್ದಾರಾ ಎಂಬ ಪ್ರಶ್ನೆಗೆ ‘ಗೊತ್ತಿಲ್ಲ’ ಎಂದು ನುಣುಚಿಕೊಂಡಿದ್ದಾರೆ.

ಶಾಸಕರ ವಿದೇಶ ಪ್ರವಾಸದ ಬಗ್ಗೆ ಯಾರ್ಯಾರು ಏನಂದರು?

ಶಾಸಕರ ವಿದೇಶ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾರು ಸ್ಪಾನ್ಸರ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಇಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಆದರೆ, ಸಚಿವ ದಿನೇಶ್ ಗುಂಡೂರಾವ್, ಸ್ಪಾನ್ಸರ್ ಎಂಬುದು ಊಹಾಪೋಹ ಸ್ಥಳದಲ್ಲಿ.

ಇನ್ನು ಶಾಸಕ ಶಿವಗಂಗಾ ಬಸವರಾಜ್, ಶಾಸಕರ ವಿದೇಶಿ ಪ್ರವಾಸಕ್ಕೆ ನನ್ನ ಆಕ್ಷೇಪ ಇಲ್ಲ, ಬಜೆಟ್ ಸಮಯದಲ್ಲಿ ಹೋಗುವುದು ಸೂಕ್ತ ಅಲ್ಲ. ಮತ್ತೊಂದೆಡೆ ಯತೀಂದ್ರ ಸಿದ್ದರಾಮಯ್ಯ, ಹೋಗುವವರಿಗೆ ಬೇಡ ಎನ್ನಲು ಆಗಲ್ಲ.

ಇದನ್ನೂ ಓದಿ: ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ ರಾಜ್ಯ ಬಜೆಟ್‌ಗೆ ಅಧಿಕೃತ ಮುಹೂರ್ತ ಫಿಕ್ಸ್

ಶಾಸಕ ಇಕ್ಬಾಲ್ ಹುಸೇನ್, ರಾಮನಗರವೇ ನನ್ನ ಪಾಲಿನ ಫಾರಿನ್ ಎಂದಿದ್ದು, ಕೆಎನ್ ರಾಜಣ್ಣ ಲೋಕೋ ಭಿನ್ನ ರುಚಿ ಅಂತಾ ವಿಭಿನ್ನ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ನಾಯಕತ್ವ ಎಂಬ ಬೆಂಕಿಯಲ್ಲಿ ಧಗಧಗಿಸುವ ಕಾಂಗ್ರೆಸ್ ನಲ್ಲಿ ಈಗ ಶಾಸಕರ ಫಾರಿನ್ ಟ್ರಿಪ್ ಬೇರೆಯದ್ದೇ ಗಾಳಿ ಬೀಸುವಂತೆ ಮಾಡಿದೆ. ಗೊಂದಲಕ್ಕೆ ತೆರೆ ಎಳೆಯಬೇಕಿದ್ದ ಹೈಕಮಾಂಡ್, ಸ್ಥಳೀಯ ಸಮಸ್ಯೆ ಎಂದು ಕೈತೊಳೆದುಕೊಂಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *