
<p>‘ಕರಾವಳಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಿಲೀಸ್ಗೆ ಸಿದ್ಧವಾಗುತ್ತಿದೆ. ಸಂಪದಾ, ರಾಜ್ ಬಿ ಶೆಟ್ಟಿ, ರಮೇಶ್ ಇಂದಿರಾ, ಮಿತ್ರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.</p><img><p>‘ನಾನು ಯಾವತ್ತೂ ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿ ಚಿತ್ರ ಮಾಡಿದ್ದೇವೆ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’. ಹೀಗೆ ಹೇಳಿದ್ದು ಪ್ರಜ್ವಲ್ ದೇವರಾಜ್.</p><img><p>ಅವರು ವಿಭಿನ್ನ ಗೆಟಪ್ನಲ್ಲಿ ನಟಿಸಿರುವ ‘ಕರಾವಳಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಿಲೀಸ್ಗೆ ಸಿದ್ಧವಾಗುತ್ತಿದೆ. ಸಂಪದಾ, ರಾಜ್ ಬಿ ಶೆಟ್ಟಿ, ರಮೇಶ್ ಇಂದಿರಾ, ಮಿತ್ರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಗುರುದತ್ ಗಾಣಿಗ ನಿರ್ದೇಶನ ಮಾಡಿದ್ದಾರೆ.</p><img><p>ಇತ್ತೀಚೆಗೆ ಬೆಂಗಳೂರಿನ ದೊಡ್ಡಾಲದ ಮರದ ಬಳಿ ಸೆಟ್ ಹಾಕಿ ಕೊನೆಯ ದಿನದ ಚಿತ್ರೀಕರಣ ಮಾಡಲಾಯಿತು. ಪ್ರಜ್ವಲ್ ದೇವರಾಜ್ ಮಹಿಷಾಸುರನ ಗೆಟಪ್ನಲ್ಲಿ ಕಾಣಿಸಿಕೊಂಡರು.</p><img><p>ಈಗಾಗಲೇ ‘ಕರಾವಳಿ’ ಸಿನಿಮಾದ ಒಂದಷ್ಟು ಪಾತ್ರಗಳ ಝಲಕ್ ಅನ್ನು ಪೋಸ್ಟರ್ ಮೂಲಕ ತೋರಿಸಲಾಗಿದೆ. ಶೀರ್ಷಿಕೆಯೇ ಸೂಚಿಸುವಂತೆ ಇದು ಕರಾವಳಿ ಭಾಗದ ಸಂಸ್ಕೃತಿ, ಸೊಗಡು ಇರುವ ಸಿನಿಮಾ ಆಗಿರಲಿದೆ.</p><img><p>ಇನ್ನು ರಾಜ್ ಬಿ ಶೆಟ್ಟಿ ಈ ಚಿತ್ರದಲ್ಲಿ ಮಾವೀರ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವರ ಫಸ್ಟ್ ಲುಕ್ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ರಾಜ್ ಬಿ ಶೆಟ್ಟಿ ಪಾತ್ರವರ್ಗಕ್ಕೆ ಸೇರ್ಪಡೆ ಆಗಿದ್ದರಿಂದ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ.</p><img><p>’ಕರಾವಳಿ’ ಸಿನಿಮಾ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕ ಹಳ್ಳಿ ಬ್ಯಾಕ್ ಡ್ರಾಪ್ನಲ್ಲಿ ಸಿನಿಮಾ ಮೂಡಿಬರಲಿದೆ. ಈ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.</p>
Source link
ಭಯಪಟ್ಟು ಮಾಡಿರುವ ಪಾತ್ರ ನನ್ನದು.. ತುಂಬಾ ಖುಷಿ ಇದೆ: ಪ್ರಜ್ವಲ್ ದೇವರಾಜ್ ಹೇಳಿದ್ದೇನು?