Headlines

ಶರಾವತಿ ಮುಳುಗಡೆ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ : ಸಿಗಂದೂರು ಸೇತುವೆ ಮೇಲೆ ಪ್ರತಿಭಟನೆ

ಶರಾವತಿ ಮುಳುಗಡೆ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ : ಸಿಗಂದೂರು ಸೇತುವೆ ಮೇಲೆ ಪ್ರತಿಭಟನೆ



ಶರಾವತಿ ಮುಳುಗಡೆ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ : ಸಿಗಂದೂರು ಸೇತುವೆ ಮೇಲೆ ಪ್ರತಿಭಟನೆ
<p>ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಅರಣ್ಯ ಭೂಮಿ ಸಾಗುವಳಿದಾರರು ತಮ್ಮ ಭೂಮಿಯ ಹಕ್ಕಿಗಾಗಿ ಪ್ರತಿಭಟನೆ ನಡೆಸಿದರು. ಮದನ್ ಗೋಪಾಲ್ ಸಮಿತಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿದರು.</p><img><p>ಶಿವಮೊಗ್ಗ: ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನ ಸಿಗಂದೂರು ಸೇತುವೆ ಮೇಲೆ ಶರಾವತಿ ಮುಳುಗಡೆ ಸಂತ್ರಸ್ತರ, ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯ್ತು.</p><img><p>ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್, ನ್ಯಾಯವಾದಿ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ರೈತರ ಭೂಮಿಯ ಹಕ್ಕಿನ ಸಮಸ್ಯೆಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾದ ತೀರ್ಮಾನ ಕೈಗೊಳ್ಳುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತವಾಗಿದೆ.</p><img><p>ರೈತರ ಭೂಮಿಯ ಹಕ್ಕಿನ ಸಮಸ್ಯೆ ಪರಿಹಾರ ಮಾಡುವಲ್ಲಿ ಈವರೆಗೆ ಅಧಿಕಾರ ನಡೆಸಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ವಿಫಲವಾಗಿವೆ. ಸರ್ಕಾರದ ಇಚ್ಛಾಶಕ್ತಿ ಕೊರತೆ ಇದಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p><img><p>ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಮದನ್ ಗೋಪಾಲ್ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು ಅರಣ್ಯಭೂಮಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಬೇಕು.</p><p><strong>ಇದನ್ನೂ ಓದಿ: </strong>ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ: 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್‌ಹ್ಯಾಂಡಾಗಿ ಸೆರೆ</p><img><p>ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಶೋಕ್ ಬೇಸೂರು, ನಾಗರಾಜ್ ಹೆಬ್ಸೆ, ಅಶೋಕ್ ಕೋಡಸರ, ಮಂಜಪ್ಪ ಆರನಕೆರೆ, ದಯಾನಂದ ಮೊದಲಾದ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.</p><p><strong>ಇದನ್ನೂ ಓದಿ: </strong><strong>ಖಮೇನಿ ಸಾವಿನ ಬಗ್ಗೆ ಮೌನ: ಕೇಂದ್ರ ಸರ್ಕಾರದ ನಡೆ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ</strong></p>



Source link

Leave a Reply

Your email address will not be published. Required fields are marked *