ಮಾಸ್ಕ್ ಧರಿಸಿ ಬಸವನಗುಡಿ ಕಡಲೆ ಕಾಯಿ ಪರಿಷೆ ಸುತ್ತಾಡಿದ ಕನ್ನಡದ ಖ್ಯಾತ ನಟಿ

ಮಾಸ್ಕ್ ಧರಿಸಿ ಬಸವನಗುಡಿ ಕಡಲೆ ಕಾಯಿ ಪರಿಷೆ ಸುತ್ತಾಡಿದ ಕನ್ನಡದ ಖ್ಯಾತ ನಟಿ


ಎಲ್ಲ ಕಡೆ ಜನ ಸಾಮಾನ್ಯರಂತೆ ಸುತ್ತಾಡಬೇಕು ಎಂಬ ಆಸೆ ಅನೇಕ ಸೆಲೆಬ್ರಿಟಿಗಳಿಗೆ ಇರುತ್ತದೆ. ಆದರೆ, ಅದು ಸಾಧ್ಯವಾಗುವುದೇ ಇಲ್ಲ. ಇದಕ್ಕೆ ಕಾರಣ ಅಭಿಮಾನಿಗಳು. ಸೆಲೆಬ್ರಿಟಿಗಳು ಹೋದ ಮೇಲೆ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಈಗ ರಚಿತಾ ರಾಮ್ (ರಚಿತಾ ರಾಮ್) ಅವರು ತಮ್ಮ ಆಸೆ ಸ್ವೀಕರಿಸಲು ಹೊಸ ಪ್ಲ್ಯಾನ್ ಮಾಡಿದ್ದರು. ನವೆಂಬರ್ 18 ರಂದು ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆ ಸುತ್ತಾಡಿದ್ದಾರೆ. ಈ ವೇಳೆ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಹೀಗಾಗಿ, ಯಾರೊಬ್ಬರೂ ಅವರನ್ನು ಗುರುತಿಸಲು ಸಾಧ್ಯವಿಲ್ಲ.

ರಚಿತಾ ರಾಮ್ ಅವರು ‘ಕ್ರಿಮಿನಲ್’ ಹೆಸರಿನ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಧ್ರುವ ಸರ್ಜಾ ನಾಯಕ. 8 ವರ್ಷಗಳ ಬಳಿಕ ಧ್ರುವ ಜೊತೆ ಅವರು ಮತ್ತೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಟೈಟಲ್ ಲಾಂಚ್ ಕಾರ್ಯಕ್ರಮ ಬಸವನಗುಡಿಯಲ್ಲೇ ನಡೆದಿದೆ. ಇದಾದ ಬಳಿಕ ರಚಿತಾ ಅವರು ಕಡಲೆಕಾಯಿ ಪರಿಷೆ ಸುತ್ತಾಡಿದ್ದಾರೆ.

ರಚಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ರಚಿತಾ ಅವರು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಹೀಗಾಗಿ ಯಾರಿಗೂ ಅವರ ಗುರುತು ಸಿಕ್ಕಿಲ್ಲ. ಅವರು ಹಾಯಾಗಿ ಅಂಗಡಿಗಳನ್ನು ಸುತ್ತಾಡಿ ಕಡಲೆಕಾಯಿ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: ಧ್ರುವ ಚಿತ್ರಕ್ಕೆ ‘ಕ್ರಿಮಿನಲ್’ ಶೀರ್ಷಿಕೆ; ಉತ್ತರ ಕರ್ನಾಟಕ ಸೊಗಡಿನ ಸಿನಿಮಾಗೆ ರಚಿತಾ ನಾಯಕಿ

’18 ವರ್ಷಗಳ ಬಳಿಕ ನಾನು ಪರಿಷೆಗೆ ಬಂದಿದ್ದೇನೆ. ಎಂತಹ ಅದ್ಭುತ ಅನುಭವ’ ಎಂದು ಅವರ ವಿಡಿಯೋಗೆ ಕ್ಯಾಪ್ಶನ್ ನಿಡಿದ್ದಾರೆ. ಈ ಪೋಸ್ಟ್ ನೋಡಿದ ಬಳಿಕ ಅನೇಕ ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದಾರೆ. ‘ನಾವು ಪರಿಷೆಯಲ್ಲೇ ಇದ್ದೆವು. ಮೊದಲೇ ಪೋಸ್ಟ್ ಮಾಡಿದ್ದರೆ ನಿಮ್ಮನ್ನು ಗುರುತಿಸಿ ಮಾತನಾಡುತ್ತಿದ್ದೆವು’ ಎಂದು ಹೇಳಿದ್ದಾರೆ. ಈ ಮೊದಲು ಅನೇಕ ಸೆಲೆಬ್ರಿಟಿಗಳು ಸಾರ್ವಜನಿಕ ಸ್ಥಳಗಳಿಗೆ ತೆರಳುವಾಗ ಮಾಸ್ಕ್ ಧರಿಸಿ ಹೋದ ಉದಾಹರಣೆ ಇದೆ. ಈಗ ರಚಿತಾ ಅವರು ಹೊಸ ಐಡಿಯಾ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 11:53 am, ಬುಧವಾರ, 19 ನವೆಂಬರ್ 25





Source link

Leave a Reply

Your email address will not be published. Required fields are marked *