ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್


ರಾಜ್ಯಸಭಾ ಉಪನಾಯಕನ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ರಾಘವ್ ಚಡ್ಡಾ ವಿಡಿಯೋ ರಿಲೀಸ್

ನವದೆಹಲಿ, ಏಪ್ರಿಲ್ 2: ಆಮ್ ಆದ್ಮಿ ಪಕ್ಷ (ಎಪಿಐ) ಸಂಸದ ರಾಘವ್ ಚಡ್ಡಾ (ರಾಘವ್ ಚಡ್ಡಾ) ಅವರ ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಹುದ್ದೆಯಿಂದ ವಜಾಗೊಳಿಸಲಾಗಿದೆ. ಅವರನ್ನು ತೆಗೆದುಹಾಕುವಂತೆ ಕೋರಿ ಎಪಿಪಿ ರಾಜ್ಯಸಭಾ ಸಚಿವಾಲಯಕ್ಕೆ ಪತ್ರ ಬರೆದಿದೆ. ಎಪಿಯ ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡುವ ಸಮಯವನ್ನು ನೀಡಬಾರದು ಎಂದು ಮನವಿ ಮಾಡಿದೆ. ಆದರೆ, ಈ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ಪಕ್ಷ ಯಾವುದೇ ಮಾಹಿತಿ ನೀಡಿರುವುದು ಕುತೂಹಲ ಮೂಡಿಸಿದೆ.

ಇನ್ನೊಂದೆಡೆ ರಾಘವ್ ಚಡ್ಡಾ ಕೂಡ ಈ ಸುದ್ದಿಯ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲವಾದರೂ ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ರಾಜ್ಯಸಭಾ ಅಧಿವೇಶನದಲ್ಲಿ ತಾವು ಮಾಡಿದ ಭಾಷಣ, ಹೈಲೈಟ್ ಮಾಡಿದ ಸಮಸ್ಯೆಗಳ ಕುರಿತಾದ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಈ ವಿಡಿಯೋ ಮೇಲೆ ಕೆಟ್ಟ ದೃಷ್ಟಿ ತಾಗದಿರಲಿ ಎಂಬ ಇಮೋಜಿ ಕೂಡ ಹಾಕಿದ್ದಾರೆ.

ರಾಘವ್ ಚಡ್ಡಾ ಅವರು ಸಂಸತ್ತಿನಲ್ಲಿ ಎದ್ದಿರುವ ಸಮಸ್ಯೆಗಳ ಕೊಲಾಜ್ ಹೊಂದಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದು ರಾಷ್ಟ್ರವ್ಯಾಪಿ ಗಮನ ಸೆಳೆದಿದೆ. ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಡೆಲಿವರಿ ವ್ಯಕ್ತಿಗಳಿಗೆ ಸೌಲಭ್ಯಗಳು, ಪಿತೃತ್ವ ರಜೆ, ಆಹಾರ ಕಲಬೆರಕೆ, ಮೊಬೈಲ್ ಡೇಟಾ ಬಳಕೆ ಮತ್ತು ವಿಮಾನ ವಿಳಂಬದಂತಹ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಂಡುಬರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *