ಪೆಟ್ರೋಲ್ ಬಂಕ್ ಸಿಬ್ಬಂದಿ ಕೆನ್ನೆಗೆ ಹೊಡೆದ ರಾಜಸ್ಥಾನದ ಅಧಿಕಾರಿಗೆ ವಾಪಾಸ್ ಕಪಾಳಮೋಕ್ಷ

ಪೆಟ್ರೋಲ್ ಬಂಕ್ ಸಿಬ್ಬಂದಿ ಕೆನ್ನೆಗೆ ಹೊಡೆದ ರಾಜಸ್ಥಾನದ ಅಧಿಕಾರಿಗೆ ವಾಪಾಸ್ ಕಪಾಳಮೋಕ್ಷ


ಜೈಪುರ, ಅಕ್ಟೋಬರ್ 23: ರಾಜಸ್ಥಾನದ (ರಾಜಸ್ಥಾನ) ಭಿಲ್ವಾರದಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಒಬ್ಬ ಉದ್ಯೋಗಿಗೆ ಕಪಾಳಮೋಕ್ಷ ಮಾಡಿದ ನಂತರ ಉಂಟಾದ ವಾಗ್ವಾದವು ಹೊಡೆದಾಟಕ್ಕೆ ಕಾರಣವಾಯಿತು. ಅಲ್ಲಿದ್ದ ಸಿಬ್ಬಂದಿ ಅಧಿಕಾರಿಗೆ ಕಪಾಳಮೋಕ್ಷ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (ವೈರಲ್ ವಿಡಿಯೋ) ಆಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಮೂವರು ಪೆಟ್ರೋಲ್ ಪಂಪ್ ನೌಕರರನ್ನು ಬಂಧಿಸಿದ್ದಾರೆ.

ಪ್ರಸ್ತುತ ಪ್ರತಾಪ್ಗಢದ ಎಸ್‌ಡಿಎಂ ಛೋಟು ಲಾಲ್ ಶರ್ಮಾ ಅವರ ಪತ್ನಿ ದೀಪಿಕಾ ವ್ಯಾಸ್ ಅವರೊಂದಿಗೆ ಪೆಟ್ರೋಲ್ ಪಂಪ್‌ಗೆ ಭೇಟಿ ನೀಡಿದಾಗ ವಾಗ್ವಾದ ಪ್ರಾರಂಭವಾಯಿತು. ಪೆಟ್ರೋಲ್ ಪಂಪ್ ಕಾರ್ಮಿಕರಲ್ಲಿ ತನ್ನತ್ತ ಕಣ್ಣು ಮಿಟುಕಿಸಿ ಅಶ್ಲೀಲಾ ಕಾಮೆಂಟ್ ಮಾಡಿದ್ದಾರೆ ಎಂದು ದೀಪಿಕಾ ವ್ಯಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ ನಂತರ ಆ ಪೆಟ್ರೋಲ್ ಪಂಪ್ ಸಿಬ್ಬಂದಿಗೆ ಅಧಿಕಾರಿ ಕಪಾಳಮೋಕ್ಷ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *