
<p>ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ಮುಂಬೈ ಮತ್ತು ಮಂಗಳೂರಿನಲ್ಲಿ ಸಮುದ್ರ ನೋಡಿ ಬೆಳೆದಿದ್ದು, ಬೆಂಗಳೂರಿನಲ್ಲಿ ಸಮುದ್ರ ಇಲ್ಲದಿರುವುದನ್ನು ಕಂಡು ಆಶ್ಚರ್ಯಪಟ್ಟಿದ್ದಾರೆ. ಬೇಸರವಾದಾಗ ಬೆಂಗಳೂರಿನ ಜನರು ಎಲ್ಲಿಗೆ ಹೋಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.</p><img><p>ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ (Bigg Boss Rakshita Shetty) ಸದ್ಯ ಸಕತ್ ಬಿಜಿಯಾಗಿದ್ದಾರೆ. ಬಿಗ್ಬಾಸ್ ಮುಗಿದು ಕೆಲ ವಾರ ಆಗಿದ್ರೂ ಇವರಿಗೆ ಸಕತ್ ಡಿಮಾಂಡ್ ಇದೆ.</p><img><p>ಓದಿ, ಬೆಳೆದದ್ದು ಎಲ್ಲಾ ಮುಂಬೈನಲ್ಲೇ ಆಗಿ, ಇದೀಗ ಕರಾವಳಿಯ ಪುಟ್ಟಿ ಎನ್ನಿಸಿಕೊಂಡಿರೋ ರಕ್ಷಿತಾ ಶೆಟ್ಟಿ, ಮುಂಬೈನಲ್ಲೂ ಸಮುದ್ರ ನೋಡಿದಾಕೆ, ಮಂಗಳೂರಿನಲ್ಲೂ ನೋಡಿದಾಕೆ. ಅದಕ್ಕಾಗಿಯೇ ಎಲ್ಲಾ ಊರುಗಳಲ್ಲಿಯೂ ಸಮುದ್ರ ಇದೇ ಎಂದೇ ಅಂದುಕೊಂಡಿದ್ದರಂತೆ!</p><img><p>’ಬಿಗ್ಬಾಸ್ಗೆಂದು ಬೆಂಗಳೂರಿಗೆ ಬಂದಾಗಲೇ ಗೊತ್ತಾಯ್ತು, ಇಲ್ಲಿ ಸಮುದ್ರ ಇಲ್ಲ ಎಂದು. ಕೇಳಿ ತುಂಬಾ ಆಶ್ಚರ್ಯ ಆಯ್ತು’ ಎಂದಿದ್ದಾರೆ ರಕ್ಷಿತಾ.</p><img><p>ನಾನು ಊರಲ್ಲಿ ತುಂಬಾ ಬೇಜಾರು ಆದಾಗ, ಒಬ್ಬಳೇ ಇದ್ದಾಗ ಸಮುದ್ರದ ಹತ್ತಿರ ಹೋಗ್ತೇನೆ. ಬೆಂಗಳೂರು ಮಂದಿ ನೀವು ಬೇಜಾರು ಆದಾಗ ಎಲ್ಲಿಗೆ ಹೋಗ್ತೀರಿ, ಸಮುದ್ರನೇ ಇಲ್ವಲ್ಲಾ ಎಂದು ಪ್ರಶ್ನಿಸಿದ್ದಾರೆ ರಕ್ಷಿತಾ!</p><img><p>ಈ ಮೂಲಕ, ಬೆಂಗಳೂರಿಗರ ಬಗ್ಗೆ ರಕ್ಷಿತಾ ಶೆಟ್ಟಿಗೆ ತುಂಬಾ ನೋವಾಗ್ತಿದೆ ಎನ್ನಿಸುವಂತೆ ಕಾಣುತ್ತಿದೆ. ಸಮುದ್ರ ಇರೋದೇ ಒಂಟಿತನ ಕಳೆಯಲು ಎಂದು ಅವರು ಭಾವಿಸಿದ್ದು, ಬೆಂಗಳೂರಿಗರು ಪಾಪ ಏನ್ ಮಾಡ್ತಾರೆ ಎನ್ನುವುದು ಅವರ ಚಿಂತೆ!</p><img><p>ಅವರ ಈ ಪ್ರಶ್ನೆಗೆ ಕೆಲವರು ಗೋವಾಕ್ಕೆ ಹೋಗ್ತೇವೆ ಎಂದರೆ, ಮತ್ತೆ ಕೆಲವರು ಬೆಂಗಳೂರಿನಲ್ಲಿ ಇರುವ ಹಲಸೂರು ಕೆರೆ, ಸ್ಯಾಂಕಿ ಟ್ಯಾಂಕ್ ಹೆಸರು ಹೇಳಿದ್ದಾರೆ. ಮತ್ತೆ ಕೆಲವರು ಕಮೆಂಟ್ನಲ್ಲಿ ಬಾರ್ಗೆ ಎಂದು ತಮಾಷೆಯ ಉತ್ತರ ಕೊಟ್ಟಿದ್ದಾರೆ.</p>
Source link
ನೀವೆಲ್ಲಾ ಒಂಟಿಯಾದ್ರೆ ಎಲ್ಲಿ ಹೋಗ್ತೀರಿ? ಬೆಂಗಳೂರಲ್ಲಿ ಸಮುದ್ರಕ್ಕಾಗಿ Rakshita Shetty ಹುಡುಕಾಟ!