ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ಮತ್ತು ವಿಜಯ್ ದೇವರಕೊಂಡ ಅವರ ವಿವಾಹ ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್ನಲ್ಲಿ ಈ ಜೋಡಿ ಇಂದು (ಫೆಬ್ರವರಿ 26) ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆ ಆಗುತ್ತಿದೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತೇಷ್ಟರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ, ರಶ್ಮಿಕಾ ಅವರಿಗೆ ತಾಳಿ ಕಟ್ಟುವ ಮೂಲಕ ಇಬ್ಬರೂ ಸತಿ-ಪತಿಗಳಾಗಿದ್ದಾರೆ.
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದದ್ದು ಗುಟ್ಟೇನೂ ಆಗಿರಲಿಲ್ಲ. ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು, ಇದೀಗ ತಮ್ಮ ಪ್ರೀತಿಯನ್ನು ದಾಂಪತ್ಯವನ್ನಾಗಿ ಬದಲಾಯಿಸಿದ್ದಾರೆ.
ಉದಯಪುರದಲ್ಲಿ ಕಳೆದ ಕೆಲವು ದಿನಗಳಿಂದಲೂ ಮದುವೆ ಕಾರ್ಯಗಳು ನಡೆಯುತ್ತಲೇ ಇದ್ದವು. ನಿನ್ನೆ ಹಳದಿ ಮತ್ತು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎರಡು ದಿನಗಳ ಹಿಂದೆ ತೆಲಂಗಾಣದಿಂದ ಪುರೋಹಿತರ ತಂಡವೊಂದು ಇವರ ಮದುವೆ ಕಾರ್ಯಕ್ರಮಕ್ಕೆಂದು ಉದಯಪುರಕ್ಕೆ ಬಂದಿತ್ತು. ಪುರೋಹಿತರು ತೆಲುಗು ಸಂಪ್ರದಾಯದಂತೆ ಈ ಜೋಡಿಯ ಮದುವೆ ಮಾಡಿದ್ದಾರೆ.
ಇದನ್ನೂ ಓದಿ:ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್
ಇದೇ ದಿನ ಸಂಜೆ ವೇಳೆಗೆ ಕೊಡವ ಸಂಪ್ರದಾಯದಂತೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಮತ್ತೊಮ್ಮೆ ನಂತರ. ಇಬ್ಬರೂ ಸಹ ಭಿನ್ನ ಭಿನ್ನ ಸಂಪ್ರದಾಯಕ್ಕೆ ಸೇರಿದ ಕುಟುಂಬದವರು ಎರಡೂ ಕುಟುಂಬಗಳ ಸಂಪ್ರದಾಯ, ಆಚರಣೆಗೆ ಚ್ಯುತಿ ಬಾರದಂತೆ ಎರಡು ಭಿನ್ನ ರೀತಿಯಲ್ಲಿ ಈ ಜೋಡಿಯ ವಿವಾಹ ನಡೆಯುತ್ತಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈಗ ಅಧಿಕೃತವಾಗಿ ಸತಿಪತಿಗಳಾಗಿದ್ದಾರೆ. ಯಾರೋ ಮದುವೆಯಾದರೂ ಮದುವೆಯ ಅಧಿಕೃತ ಫೋಟೋವನ್ನು ಈ ಜೋಡಿ ಹಂಚಿಕೊಂಡಿಲ್ಲ.
ರಶ್ಮಿಕಾ ಮತ್ತು ವಿಜಯ್ ಅವರ ಮದುವೆಗೆ ಕೇವಲ ಆಪ್ತೇಷ್ಟರಿಗಷ್ಟೇ ಆಹ್ವಾನ ನೀಡಿದ್ದು, ಮಾರ್ಚ್ 04 ರಂದು ಬಲು ಅದ್ಧೂರಿಯಾಗಿ ಆರತಕ್ಷತೆ ಹಮ್ಮಿಕೊಂಡಿದ್ದು, ಹೈದರಾಬಾದ್ ನ ತಾಜ್ ಕೃಷ್ಣನಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ. ಆ ಕಾರ್ಯಕ್ರಮದಲ್ಲಿ ಎಲ್ಲ ಚಿತ್ರರಂಗದ ಗಣ್ಯರು, ಆಂಧ್ರ, ತೆಲಂಗಾಣ ರಾಜ್ಯಗಳ ರಾಜಕೀಯ ಕಾರ್ಯಕ್ರಮಗಳು ಹಾಗೂ ಕೆಲವು ಕೇಂದ್ರ ಸಚಿವರು, ಸಂಸದರು ಸಹ ಭಾಗಿ ಆಗಲಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ