ರಾಮನಗರ, (ಡಿಸೆಂಬರ್ 19): ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (ಬೆಂಗಳೂರು ದಕ್ಷಿಣ) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ನಡೆದಿದೆ. ಮೂಲತಃ ಮಾಗಡಿ (ಮಾಗಡಿ) ತಾಲೂಕಿನ ದೊಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದಲ್ಲಿ ವಾಸವಾಗಿರುವ ಚಲುವ (40) ಹತ್ಯೆಯಾದ. ಇನ್ನು ಕೊಲೆಯಾದ ಚಲುವ ಬಗ್ಗೆ ಸಂಬಂಧಿಗಳು ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ..