ಚಿತ್ರದುರ್ಗ, ಡಿಸೆಂಬರ್ 10: ರೇಣುಕಾಸ್ವಾಮಿ ಹತ್ಯೆ ಪ್ರಕರಣ ವಿಚಾರವಾಗಿ ಪ್ರಮುಖ ಆರೋಪಿಗಳು ನಟ ದರ್ಶನ್ಪವಿತ್ರಾ ಸೇರಿ ಗ್ಯಾಂಗ್ ಜೈಲು ಸೇರಿರುವ ನಡುವೆ ಇತ್ತ ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಸಮಾಧಿಯ ನಾಮಫಲಕ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ರುದ್ರಭೂಮಿ ಬಳಿ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಧಕ್ಕೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ರೇಣುಕಾಸ್ವಾಮಿ ಕುಟುಂಬಸ್ಥರು. ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣ 2024 ಜೂನ್ ತಿಂಗಳಿನಲ್ಲಿ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.