Headlines

Republic Day 2026: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Republic Day 2026: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು


ದೆಹಲಿ, ಜ.26: 2026ರ ಗಣರಾಜ್ಯೋತ್ಸವದಂದು ದೇಶವು ಅತ್ಯಂತ ಹೆಮ್ಮೆಯ ಕ್ಷಣಕ್ಕೆ ಸಾಕ್ಷಿಯಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು. ಇದು 77ನೇ ಗಣರಾಜ್ಯೋತ್ಸವದ ಪ್ರಮುಖ ಘಟನೆಗಳಲ್ಲಿ ಒಂದಾಗಿತ್ತು. ಶುಭಾಂಶು ಶುಕ್ಲ ಅವರ ಈ ಗೌರವಕ್ಕೆ ಕಾರಣ ಅವರ ಅಸಾಧಾರಣ ಸೇವೆ ಮತ್ತು ಸಾಹಸಮಯ ಕಾರ್ಯ. ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸಿದಂತಹ ಮಹತ್ತರ ಕೀರ್ತಿ ಅವರಿಗೆ ಸಲ್ಲುತ್ತದೆ. ಈ ಅನನ್ಯ ಸಾಧನೆ ಮತ್ತು ಧೈರ್ಯಕ್ಕಾಗಿ ಅಶೋಕ ಚಕ್ರದಂತಹ ಶ್ರೇಷ್ಠ ಗೌರವವನ್ನು ಅವರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯು ಅವರ ಸಮರ್ಪಣೆ, ಸಾಹಸ ಮತ್ತು ರಾಷ್ಟ್ರಕ್ಕಾಗಿ ಮಾಡಿದ ಅಪ್ರತಿಮ ಕೊಡುಗೆಯನ್ನು ಗುರುತಿಸಲಾಗಿದೆ. ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಈ ಸಾಧನೆಯು ಯುವ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಮತ್ತು ಭಾರತೀಯ ಸೇನೆಯ ಶೌರ್ಯ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ. ದೇಶದ ಗೌರವ ಮತ್ತು ಕೀರ್ತಿಯನ್ನು ಬಾಹ್ಯಾಕಾಶದಲ್ಲೂ ಎತ್ತಿ ಹಿಡಿದ ಅವರ ಕಾರ್ಯ ಸದಾ ಸ್ಮರಣೀಯ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *