ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಇದೀಗ ಮತ್ತೊಮ್ಮೆ ತಮ್ಮ ಅಭಿಮಾನಿಗಳ ಹೃದಯಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಮೈದಾನದಲ್ಲಿ ಅದ್ಭುತ ಆಟಗಾರನಾಗಿ ಮಿಂಚುತ್ತಿರುವ ಪಂತ್, ಇದೀಗ ಮೈದಾನದಾಚೆ ಬಡ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಗಮನ ಸೆಳೆದಿದ್ದಾರೆ.
ಯಾವುದೇ ಗುರುತು–ಪರಿಚಯವೇ ಇಲ್ಲದ ಕನ್ನಡದ ಹುಡುಗಿಯ ವಿದ್ಯಾಭ್ಯಾಸಕ್ಕೆ ಪಂತ್ ನೆರವಾಗಿದ್ದಾರೆ. ಉತ್ತರಪ್ರದೇಶ ಮೂಲದ ಕ್ರಿಕೆಟಿಗ ಇದೀಗ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಎನ್ನುವ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವು ನೀಡಿ ಗಮನ ಸೆಳೆದಿದ್ದಾರೆ. ರಿಷಭ್ ಪಂತ್ ಹೇಗೆ ನೆರವಾದರು ಎನ್ನುವುದನ್ನು ನೋಡೋಣ ಬನ್ನಿ.