Headlines

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ಬಿಗ್​​ ಅಪ್ಡೇಟ್​​ ಕೊಟ್ಟ ರಾಬರ್ಟ್ ವಾದ್ರಾ

ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ಬಿಗ್​​ ಅಪ್ಡೇಟ್​​ ಕೊಟ್ಟ ರಾಬರ್ಟ್ ವಾದ್ರಾ


ಬೆಂಗಳೂರು, ಫೆಬ್ರವರಿ 27: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಬೆಂಗಳೂರಿಗೆ ಆಗಮಿಸಿದ್ದು, ನಗರದ ವಿವಿಧ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಇಸ್ಕಾನ್ ಮತ್ತು ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರದಲ್ಲಿಯೂ ಸಮಯ ಕಳೆದಿದ್ದಾರೆ. ಬೆಂಗಳೂರಿನಲ್ಲಿ ತಮಗೆ ದೊರೆತ ಅಪಾರ ಪ್ರೀತಿ ಮತ್ತು ಅಭಿಮಾನವನ್ನು ವಾದ್ರಾ ಶ್ಲಾಘಿಸಿದ್ದು, ಬೆಂಗಳೂರು ತಮಗೆ ಎರಡನೇ ಮನೆಯಂತಿದೆ ಎಂದು ಬಣ್ಣಿಸಿದ್ದಾರೆ. ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಮಾತನಾಡಿರುವ ವಾದ್ರಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರ್ನಾಟಕದ ಜನರ ಪ್ರಗತಿಗಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ, ಅವರು ಒಟ್ಟಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ನಾಯಕತ್ವ ಬದಲಾವಣೆಯ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ವಾದ್ರಾ ಬಯಸುತ್ತಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *