Headlines

ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು, ರಿಷಬ್‌ ಶೆಟ್ಟಿ ದೈತ್ಯ ಪ್ರತಿಭೆ: ರುಕ್ಮಿಣಿ ವಸಂತ್ ಹೇಳಿದ್ದೇನು?

ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು, ರಿಷಬ್‌ ಶೆಟ್ಟಿ ದೈತ್ಯ ಪ್ರತಿಭೆ: ರುಕ್ಮಿಣಿ ವಸಂತ್ ಹೇಳಿದ್ದೇನು?



ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು, ರಿಷಬ್‌ ಶೆಟ್ಟಿ ದೈತ್ಯ ಪ್ರತಿಭೆ: ರುಕ್ಮಿಣಿ ವಸಂತ್ ಹೇಳಿದ್ದೇನು?
<p>ಸಿನಿಮಾ ಮೇಕಿಂಗ್‌ ವೇಳೆ ಎಲ್ಲವನ್ನೂ ಏಕಕಾಲಕ್ಕೆ ಗ್ರಹಿಸುವಯಶ್‌ ಅವರ ದೃಷ್ಟಿಕೋನ ನನಗೆ ಅಚ್ಚರಿ ತರಿಸಿತು. ರಿಷಬ್‌ ಅವರು ಅಂಥಾ ದೈತ್ಯ ಪ್ರತಿಭೆ’ ಎಂದೂ ರುಕ್ಮಿಣಿ ವಸಂತ್‌ ಹೇಳಿದ್ದಾರೆ.</p><img><p>‘ಸಿನಿಮಾ ಮೇಕಿಂಗ್‌ ವೇಳೆ ಎಲ್ಲವನ್ನೂ ಏಕಕಾಲಕ್ಕೆ ಗ್ರಹಿಸುವ ಯಶ್‌ ಅವರ ದೃಷ್ಟಿಕೋನ ನನಗೆ ಅಚ್ಚರಿ ತರಿಸಿತು. ಅವರದು ಸಿನಿಮಾವನ್ನೂ ಮೀರಿದ ಅಗಾಧ ಗ್ರಹಿಕೆ. ಅದೊಂಥರ ಸಾಂಸ್ಕೃತಿಕ ಯುಗ ಧರ್ಮದಂತಿರುತ್ತದೆ’.</p><img><p>ಯಶ್‌ ಬಗ್ಗೆ ರುಕ್ಮಿಣಿ ವಸಂತ್‌ ಆಡಿರುವ ಮಾತುಗಳಿವು. ಈ ಮೂಲಕ ರುಕ್ಮಿಣಿ, ಯಶ್‌ ಕುರಿತಾದ ತಮ್ಮ ಗ್ರಹಿಕೆಗಳನ್ನು ದಾಖಲಿಸುವ ಜೊತೆಗೆ ‘ಟಾಕ್ಸಿಕ್‌’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದನ್ನು ಅಧಿಕೃತಗೊಳಿಸಿದ್ದಾರೆ.</p><img><p>‘ಕಾಂತಾರದ ಜಗತ್ತು ನಮ್ಮ ಕಲ್ಪನೆಯನ್ನೂ ಮೀರಿದ್ದು. ಆಳದವರೆಗೆ ಹಬ್ಬಿರುವ ಸಾಂಸ್ಕೃತಿಕ ಬೇರುಗಳನ್ನು ಸ್ಪರ್ಶಿಸಿ ವರ್ತಮಾನಕ್ಕೂ ಅನ್ವಯಿಸಿ ಕತೆ ಹೇಳುವ ಕಲೆ ದೊಡ್ಡದು. ರಿಷಬ್‌ ಅವರು ಅಂಥಾ ದೈತ್ಯ ಪ್ರತಿಭೆ’ ಎಂದೂ ರುಕ್ಮಿಣಿ ಹೇಳಿದ್ದಾರೆ.</p><img><p>ನನಗೆ ಪ್ಯಾನ್‌ ಇಂಡಿಯಾ ಸ್ಟಾರ್‌ ಅನ್ನೋದಕ್ಕಿಂತಲೂ ಭಾಷೆಯನ್ನು ಮಾಧ್ಯಮವಾಗಿಟ್ಟು ಹೆಚ್ಚು ಹೆಚ್ಚು ಜನರನ್ನು ತಲುಪುವುದೇ ಮುಖ್ಯ. ಕನ್ನಡ ಚಿತ್ರರಂಗದಲ್ಲಿ ತಳಮಟ್ಟದಿಂದಲೇ ಅದ್ಭುತ ಕೆಲಸಗಳಾಗುತ್ತಿವೆ.</p><img><p>ಕೆಜಿಎಫ್‌, ಕಾಂತಾರದಂಥಾ ಜಗತ್ತು ತಿರುಗಿ ನೋಡುವ ಸಿನಿಮಾಗಳ ಜೊತೆಗೆ ‘ಸನ್‌ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ’ ಎಂಬ ಆಸ್ಕರ್‌ ರೇಸ್‌ನಲ್ಲಿರುವ ಕಿರುಚಿತ್ರದ ಜೊತೆಗೆ ವೈವಿಧ್ಯಮಯ ಸಿನಿಮಾಗಳು ಬರುತ್ತಿವೆ. ಇಂಥಾ ಇಂಡಸ್ಟ್ರಿಯಿಂದ ಬಂದು, ಈ ಚಿತ್ರರಂಗ ಗರಿಗೆದರುವ ಹೊತ್ತಿನಲ್ಲಿ ಮುಖ್ಯ ಭೂಮಿಕೆಯಲ್ಲಿರುವುದು ಖುಷಿ ಅನಿಸುತ್ತದೆ ಎಂದಿದ್ದಾರೆ.</p>



Source link

Leave a Reply

Your email address will not be published. Required fields are marked *