ಶಬರಿಮಲೆ ದೇವಸ್ಥಾನದ (ಶಬರಿಮಲೆ ಚಿನ್ನದ ಲೇಪನ ಹಗರಣ) ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಇದೀಗ ಎಸ್ ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ, ದೇವಾಲಯದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಗರ್ಭಗುಡಿಯ ದ್ವಾರಪಾಲಕ ಶಿಲ್ಪ ಮತ್ತು ಚಿನ್ನದಿಂದ ಆವೃತವಾದ ಮರದ ಬಾಗಿಲಿನ ರಚನೆಯಿಂದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ವಿಡಿಯೋವೊಂದು ಎಎನ್ ಐ ಹಂಚಿಕೊಂಡಿದೆ. ತನಿಖೆಯ ಭಾಗವಾಗಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಅವರು ಎಸ್ಐಟಿ ವಶಪಡಿಸಿಕೊಂಡಿದ್ದು ತನಿಖೆಯನ್ನು ನಡೆಸುತ್ತಿದೆ. ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಗೆಯಲ್ಲಿ ಬರೋಬ್ಬರಿ 4.54 ಕೆಜಿ ಲೇಪನ ಕಾಣುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ