Headlines

ವಿಚ್ಛೇದನದ ವೇಳೆ ಸಂತ್ರಸ್ತೆ ಅನ್ನೋ ರೀತಿ ಬಿಂಬಿಸಿಕೊಂಡಿದ್ರಾ ಸಮಂತಾ? ಆಪ್ತೆಯಿಂದಲೇ ಶಾಕಿಂಗ್ ಹೇಳಿಕೆ

ವಿಚ್ಛೇದನದ ವೇಳೆ ಸಂತ್ರಸ್ತೆ ಅನ್ನೋ ರೀತಿ ಬಿಂಬಿಸಿಕೊಂಡಿದ್ರಾ ಸಮಂತಾ? ಆಪ್ತೆಯಿಂದಲೇ ಶಾಕಿಂಗ್ ಹೇಳಿಕೆ


ಸಮಂತಾ (ಸಮಂತಾ) ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದಾಗ ಆರೋಪಗಳೆಲ್ಲ ನಾಗ ಚೈತನ್ಯ ಅವರ ಮೇಲೆ ಇತ್ತು. ಈ ವಿಚ್ಛೇದನಕ್ಕೆ ನಾಗ ಚೈತನ್ಯ ಕಾರಣ ಎಂಬ ಮಾತುಗಳು ಕೇಳಿ ಬಂದವು. ಈಗ ಸಮಂತಾಗೆ ಎರಡನೇ ವಿವಾಹವಾಗಿದೆ. ‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕ ರಾಜ್ ಜೊತೆ ಸಮಂತಾ ಹೊಸ ಬಾಳು ಆರಂಭಿಸಿದ್ದಾರೆ. ಇವರ ಮದುವೆಯ ಬೆನ್ನಲ್ಲೇ ಸಮಂತಾ ಆಪ್ತೆ ಎನಿಸಿಕೊಂಡಿದ್ದ ಮೇಕಪ್ ಆರ್ಟಿಸ್ಟ್ ಸಾಧನಾ ಸಿಂಗ್ ಪೋಸ್ಟ್ ವೈರಲ್ ಆಗಿದೆ. ಅವರು ಎಲ್ಲಿಯೂ ಹೆಸರು ಉಲ್ಲೇಖಿಸಿಲ್ಲ. ಆದರೆ, ಪರೋಕ್ಷ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ.

ಸಮಂತಾ ಮತ್ತು ರಾಜ್ ನಿಡಿಮೋರು ಸೋಮವಾರ (ಡಿಸೆಂಬರ್ 1) ವಿವಾಹವಾದರು. ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ಈ ಮದುವೆ ನಡೆದ. ಸಮಂತಾ ಹಾಗೂ ರಾಜ್ ಭೇಟಿ ಆಗಿದ್ದು 2019ರಲ್ಲಿ. ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನ ಪಡೆದಿದ್ದು 2021ರಲ್ಲಿ. ಹೀಗಾಗಿ, ರಾಜ್ ಮತ್ತು ಸಮಂತಾ ಪರಿಚಯವೇ ಅವರ ದಾಂಪತ್ಯಕ್ಕೆ ಮುಳುವಾಯಿತೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಈ ಚರ್ಚೆಯಲ್ಲಿ ಬೆನ್ನ ಸಮಂತಾ ಮೇಕಪ್ ಆರ್ಟಿಸ್ಟ್ ಮಾಡಿರೋ ಪೋಸ್ಟ್ ಗಮನ ಸೆಳೆದಿದೆ. ‘ವಿಲನ್ ಆದವನು ತಾನೇ ಸಂತ್ರಸ್ತ ಎಂದು ಚೆನ್ನಾಗಿ ನಾಟಕ ಮಾಡುತ್ತಾನೆ’ ಎಂಬರ್ಥ ಬರುವ ರೀತಿಯಲ್ಲಿ ಸಾಧನಾ ಪೋಸ್ಟ್ ಮಾಡಿದ್ದಾರೆ. ಇದು ಸಮಂತಾಗೆ ಹೇಳಿದ್ದು ಎನ್ನಲಾಗುತ್ತಿದೆ. ಇಷ್ಟೇ ಅಲ್ಲ, ಸಮಂತಾ ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಅವರು ಅನ್ಫಾಲೋ ಮಾಡಿದ್ದಾರೆ.

ಇದನ್ನೂ ಓದಿ: ತುಂಬಾ ಸರಳವಾಗಿ ನಡೆದ ಸಮಂತಾ ಮದುವೆ: ಫೋಟೋ ಗ್ಯಾಲರಿ ನೋಡಿ..

ರಾಜ್ ಮತ್ತು ಸಮಂತಾಗೆ ಪರಿಚಯ ಆಗುವಾಗ ರಾಜ್‌ಗೆ ಆಗಲೇ ವಿವಾಹ ಆಗುತ್ತಿದೆ. ಶ್ಯಾಮಲಿ ಎಂಬುವವರ ಜೊತೆ ಇವರ ಮದುವೆ ನಡೆದಿತ್ತು. ಆದರೆ, ರಾಜ್ ಹಾಗೂ ಶ್ಯಾಮಲಿ ಬೇರೆ ಆಗಿದ್ದಾರೆ. ಇವರ ದಾಂಪತ್ಯದಲ್ಲಿ ಬಿರುಕು ಮೂಡಲು ಸಮಂತಾ ಕಾರಣ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ, ಇದ್ಯಾವುದನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *