
ಮುಂಬೈ, ಏಪ್ರಿಲ್ 09: ನ್ಯಾಯಾಲಯದಲ್ಲಿ ಒಬ್ಬ ಆರೋಪಿ ಪೊಲೀಸ್(ಪೋಲೀಸ್) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆ ಯತ್ನ ಪ್ರಕರಣದ ವಿಚಾರಣೆ ನಡೆಸಿದ ಆರೋಪಿ ಹ್ಯಾರಿಸನ್ ಆಂಥೋನಿ ಜೋಸೆಫ್, ಪೊಲೀಸ್ ಕಾನ್ ಟೇಬಲ್ ಮೇಲೆ ಹಲ್ಲೆ ನಡೆಸಿ ಕೈಕೋಳ ಸಮೇತ ಪರಾರಿ ಆರೋಪಿ, ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
42 ವರ್ಷದ ಹ್ಯಾರಿಸನ್ ಆಂಥೋನಿ ಜೋಸೆಫ್ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮಾರ್ಚ್ 2024ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪ ಎದುರಿಸುತ್ತಿದ್ದಾನೆ. ಆರ್ಥರ್ ರಸ್ತೆ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದಾಗ, ಪೊಲೀಸ್ ಕಾನ್ಸ್ಟೇಬಲ್ ಪ್ರಶಾಂತ್ ಕಾಂಬ್ಳೆ ಅವರ ಮೇಲೆ ದಾಳಿ ನಡೆಸಿ ನ್ಯಾಯಾಲಯದ ಆವರಣದಿಂದಲೇ ತಪ್ಪಿಸಿಕೊಂಡಿದ್ದಾನೆ.ಕೊಲಾಬಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (ಎಫ್ಐಆರ್) ದಾಖಲಾಗಿದ್ದು, ರೈಲು ನಿಲ್ದಾಣಗಳು ಸೇರಿದಂತೆ ಪ್ರಮುಖ ಸಾರಿಗೆ ಕೇಂದ್ರಗಳಲ್ಲಿ ಪೊಲೀಸ್ ವಿಶೇಷ ತಂಡಗಳು ಹದ್ದಿನ ಕಣ್ಣಿಟ್ಟಿವೆ.
ಕೇರಳದ ಜೋಸೆಫ್ ಪರಾರಿಯಾಗಿರುವುದರಿಂದ, ಹೆಚ್ಚಿನ ಟರ್ಮಿನಲ್ಗಳು ಮತ್ತು ಇತರ ಸಾರಿಗೆ ಕೇಂದ್ರಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅನೇಕ ತಂಡಗಳನ್ನು ನಿಯೋಜಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಮತ್ತಷ್ಟು ಓದಿ: ತಂದೆ-ಮಗನ ಲಾಕಪ್ ಡೆತ್ ಪ್ರಕರಣ; ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ
2024 ರಲ್ಲಿ ನಡೆದ ಸಣ್ಣ ವಿವಾದಕ್ಕೆ ಜೋಸೆಫ್ ಮತ್ತು ಅವರ ಸಹಚರರು ಬ್ಯಾಗ್ ಮಾರಾಟಗಾರ ರಾಜು ಶೇಖ್ ಅವರ ಮೇಲೆ ಏರ್ ಗನ್ ನಿಂದ ಹಲ್ಲೆ ನಡೆಸಿದ್ದ ಆರೋಪವಿದೆ. ನ್ಯಾಯಾಲಯದ ಕಟಕಟೆಗೆ ತೆಗೆದುಕೊಳ್ಳುತ್ತಿದ್ದ ಘಟನೆ ನಡೆದಿದೆ. ಮಾರ್ಚ್ 2024 ರಲ್ಲಿ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ್ದರು ಮತ್ತು ಆತನನ್ನು ಜನವರಿ 2025 ರಲ್ಲಿ ಬಂಧಿಸಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ