ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ


ಗದಗ, ಫೆ.21: ಶಿರಹಳ್ಳ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ದಲಿತ ಮುಖಂಡ ಹರೀಶ್, ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಕಿಡಿಕಾರಿದ್ದಾರೆ. ಶಾಸಕ ಚಂದ್ರು ಲಮಾಣಿ ಮತ್ತು ಮಾಜಿ ಶಾಸಕ ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಯಾಗಿದ್ದಾರೆ. ಸಮುದಾಯಕ್ಕಾಗಿ ಹೋರಾಡುವ ಇಂತಹ ನಾಯಕರನ್ನು ಹತ್ತಿಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ದಲಿತ ಮತ್ತು ಹಿಂದುಳಿದ ವರ್ಗದ ನಾಯಕರು ರಾಜಕೀಯವಾಗಿ ಬೆಳೆಯುವುದನ್ನು ಸಹಿಸದ ಶಕ್ತಿಗಳು ಈ ರೀತಿಯ ಲೋಕಾಯುಕ್ತ ಟ್ರ್ಯಾಪ್‌ಗಳ ಮೂಲಕ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿವೆ. ಇಬ್ಬರು ಪ್ರಮುಖ ನಾಯಕರ ಮೇಲೆ ಈ ರೀತಿಯ ಒತ್ತಡದ ತಂತ್ರಗಳನ್ನು ಲಂಬಾಣಿ ಮತ್ತು ದಲಿತ ಸಮಾಜ ಸಹಿಸುವುದಿಲ್ಲ. ಅವರ ವಿರುದ್ಧ ಸಂಚನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *