ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು



ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
<p>ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು, 22 ವರ್ಷದ ವಿದ್ಯಾರ್ಥಿನಿ ಎದೆ ನೋವಿನಿಂದ ಕುಸಿದು ಬಿದ್ದಿದ್ದಾಳೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದರೆ, ಇತ್ತ ಹಾಸ್ಟೆಲ್ ಇತರ ವಿದ್ಯಾರ್ಥನಿಯರು ಆಘಾತಕ್ಕೊಳಗಾಗಿದ್ದಾರೆ.</p><img><p>ಆರೋಗ್ಯ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ತೀವ್ರ ಆತಂಕ ಸೃಷ್ಟಿಸುತ್ತಿದೆ. ಪ್ರಮುಖವಾಗಿ ಕೋರೋನಾ ಬಳಿಕ ಹೆಚ್ಚುತ್ತಿರುವ ಹೃದಯಾಘಾತ ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದೆ. ಇದೀಗ 22 ವರ್ಷದ ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.</p><img><p>ಶೃಂಗೇರಿ ಪಟ್ಟಣದ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದ ದಿಶಾ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಇಂದು (ಡಿ.16) ಹಾಸ್ಟೆಲ್ ನಲ್ಲಿ ತೀವ್ರ ಎದೆ ನೋವಿನಿಂದ ವಿದ್ಯಾರ್ಥಿನಿ ದಿಶಾ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಕುಸಿದು ಬಿದ್ದ ಬೆನ್ನಲ್ಲೇ ದಿಶಾ ಮೃತಪಟ್ಟಿದ್ದಾಳೆ.</p><img><p>ಶೃಂಗೇರಿಯ ಜೆಸಿಬಿಎಂ ಕಾಲೇಜಿನ ವಿದ್ಯಾರ್ಥಿನಿ ಆಗಿದ್ದ ದಿಶಾ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಯಾಗಿದ್ದರು. ಬಿಕಾಂ ವಿದ್ಯಾಭ್ಯಾಸಕ್ಕಾಗಿ ಶೃಂಗೇರಿಯ ಜಿಸಿಬಿಎಂ ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಸಂಜೆ ಎದೆನೋವಿನಿಂದ ಬಳಲಿದ ದಿಶಾ ಕೆಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ.</p><img><p>ಓದಿನಲ್ಲು ಚುರುಕಾಗಿದ್ದ ದಿಶಾ, ಆರೋಗ್ಯವಾಗಿದ್ದಳು. ಗಂಭೀರ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ದಿಶಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಹಾಸ್ಟೆಲ್‌ನ ಇತರ ವಿದ್ಯಾರ್ಥಿನಿಯರು ತೀವ್ರ ಆತಂಕಗೊಂಡಿದ್ದಾರೆ.</p><h2>ಮುಗಿಲು ಮುಟ್ಟಿದ ಆಕ್ರಂದನ</h2><img><p>ಯುವ ಸಮೂಹದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೊಡಗಿನ ಕುಶಾಲನಗರ ತಾಲ್ಲೂಕಿನ ಬ್ಯಾಡಗೊಟ್ಟ ಗ್ರಾಮದ 20 ವರ್ಷದ ಗಣೇಶ್ ಹೃದಯಾಘಾತಕ್ಕೆ ಬಲಿಯಾಗಿದ್ದರು. ಮನೆಯಲ್ಲಿ ಇರುವಾಗಲೇ ಕುಸಿದು ಬಿದ್ದು ಗಣೇಶ್ ಮೃತಪಟ್ಟಿದ್ದರು.</p><h2>ಹೃದಯಾಘಾತದಿಂದ ಯುವಕ ಸಾವು</h2>



Source link

Leave a Reply

Your email address will not be published. Required fields are marked *