ಸೋಶಿಯಲ್ ಮೀಡಿಯಾದಲ್ಲಿ ಕಾಡುತ್ತಿರುವ ಕಾನ್ಟೇಬಲ್; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ!
ಶಿವಮೊಗ್ಗ, ಫೆಬ್ರವರಿ 21: ಜಿಲ್ಲೆಯಲ್ಲಿ ಕಾನ್ಟೇಬಲ್ನ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ (ಶಿವಮೊಗ್ಗ) ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ವಿಪರೀತ ತೊಂದರೆ ನೀಡುತ್ತಿರುವುದು ಬೆಳಕಿಗೆ ಬಂದಿದೆ.
ಕಾನ್ಟೇಬಲ್ ಮೋಹನ್ ವಿರುದ್ಧ ಎಫ್ಐಆರ್
ಮೃತಳ ತಾಯಿ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಕಾನ್ಟೇಬಲ್ ಮೋಹನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಫೇಸ್ಬುಕ್ ಮತ್ತು ಮೆಸೇಂಜರ್ ಮೂಲಕ ತನ್ನ ಮಗಳಿಗೆ ನಿರಂತರವಾಗಿ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದೇನೆ, ಬ್ಲಾಕ್ ಮಾಡಿದರೂ ಬೇರೆ ಖಾತೆಗಳಿಂದ ಸಂಪರ್ಕಿಸುತ್ತಿದ್ದನೆಂದು ದೂರಿನಲ್ಲಿ ತಾಯಿ ಉಲ್ಲೇಖಿಸಿದ್ದಾರೆ. ಮಹಿಳೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.ಮೃತದೇಹದ ಮರಣೋತ್ತರ ಪರೀಕ್ಷೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ನಿಂತಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಬಿ. ನಿಖಿಲ್ ಪ್ರತಿಕ್ರಿಯೆ ನೀಡಿದ್ದು, ಆರೋಪಿ ಕಾನ್ಟೇಬಲ್ ಮೋಹನ್ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ ಹಾಗೂ ಶೀಘ್ರದಲ್ಲೇ ಬಂಧಿಸಲಾಗಿದೆ.
ಇನ್ನೂ ಅನೇಕ ಮಹಿಳೆಯರಿಗೆ ಕಾಟ ಕೊಟ್ಟಿದ್ದ ಆಸಾಮಿ
ಮೋಹನ್ ಈ ಹಿಂದೆ ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಅಶಿಸ್ತು ಹಿನ್ನೆಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಠಾಣೆಗೆ ವರ್ಗಾವಣೆಗೊಂಡಿರುವುದಾಗಿ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಇನ್ನೂ ಅನೇಕ ಮಹಿಳೆಯರಿಗೆ ಇದೇ ರೀತಿ ಕಿರುಕುಳ ನೀಡಿದ್ದಾನೆ ಎಂಬ ಆರೋಪಗಳು ಕೇಳಿಬಂದಿವೆ. ಜೊತೆಗೆ ಮನೆಗಳಿಗೆ ಬಡ್ಡಿ ವ್ಯವಹಾರ ನಡೆಸುತ್ತಿದ್ದನೆಂಬ ದೂರುಗಳಿವೆ ಎಂದು ಹೇಳಲಾಗಿದೆ.
ಇದನ್ನೂ ಓದಿ ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮೇಲೆ ಬಿತ್ತು ಕೇಸ್
ಆರು ದಿನಗಳ ಹಿಂದೆ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಪೊಲೀಸ್ ಪೇದೆ ಜಗದೀಶ್ ಅನಾರೋಗ್ಯದಿಂದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಆತ್ಮಹತ್ಯೆ ಮಾಡಿಕೊಂಡ ಆರು ದಿನಗಳಲ್ಲಿ ಪತ್ನಿ ಕೂಡ ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ತಂದೆ ತಾಯಿಯಿಲ್ಲದೆ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 2:19 pm, ಶನಿ, 21 ಫೆಬ್ರವರಿ 26