
ಬೆಂಗಳೂರು, (ಮಾರ್ಚ್ 25): ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ನೀಡುವ ವೇಳೆ ಕೆಲ ಸ್ವಾರಸ್ಯಕರ ಪ್ರಸಂಗಗಳು ನಡೆಯುತ್ತಿವೆ. ಪ್ರಮುಖವಾಗಿ ಡಿಕೆ ಶಿವಕುಮಾರ್ ಶಾಲ್ ಹಾಕುತ್ತಿರುವ ಬಗ್ಗೆ ಚರ್ಚೆ, ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಧ್ಯಪ್ರವೇಶಿಸಿ, ನೀವು ಶಾಲು ಹಾಕಿದ ಮೇಲೆ ಮುಖ್ಯಮಂತ್ರಿ ಆಗಿದ್ದಾರೆ. ಅದಕ್ಕೆ ಡಿಕೆ ಕೂಡ ಶಾಲು ಹಾಕಿದ್ದಾರೆ ಸಿದ್ದರಾಮಯ್ಯನವರ ಕಾಲೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮೊದಲು ಟವೆಲ್ ಹಾಕುತ್ತಿದ್ದರು. ಅದು ಯಾವಾಗಲೂ ಬಿದ್ದು ಹೋಗುವುದಿಲ್ಲ. ಅವತ್ತಿನಿಂದ ನಾನು ಶಾಲು ಹಾಕ್ತಿರೋದು, ಬೇರೆ ಅರ್ಥ ಬೇಡ. ನಾನು ದೇವರಿದ್ದಾನೆ ಎನ್ನುವುದನ್ನು ಒಪ್ಪುತ್ತೇನೆ. ಆದರೆ ದೇವಸ್ಥಾನದಲ್ಲಿಲ್ಲ. ಉಳ್ಳವರು ದೇವಾಲಯ ಮಾಡುತ್ತಾರೆ, ನಾನೇನು ಮಾಡಲಯ್ಯ, ಈ ಬಗ್ಗೆ ಬಸವಣ್ಣ ಅವರು ಹೇಳಿದ್ರು ಎಂದು ಬಸವಣ್ಣನ ವಚನದ ಮೂಲಕ, ಸುನೀಲ್ ಕುಮಾರ್ ಅವರು ಟಾಂಗ್ ಕೊಟ್ಟರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ