ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾಾರ್ಡ್’ ಸಿನಿಮಾ ನೋಡೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದುನಿಯಾ ವಿಜಯ್ ಹಾಗೂ ಸಿನಿಮಾ ಸಿಎಂ ತಂಡವನ್ನು ಭೇಟಿ ಮಾಡಿ ಆಮಂತ್ರಣ ನೀಡಿದೆ. ಶೋಷಣೆಗೆ ಒಳಗಾದ ಜನರ ಕರುಣಾಜನಕ ಕಥೆಯನ್ನು ಈ ಸಿನಿಮಾ ಹೊಂದಿದೆ. ಚಿತ್ರಕ್ಕೆ ಸಿಎಂ ಶುಭಾಶಯ ಕೋರಿದ್ದಾರೆ. ಅವರಿಗಾಗಿ ತಂಡ ವಿಶೇಷ ಪ್ರದರ್ಶನ ನೀಡುವ ಸಾಧ್ಯತೆಯಿದೆ. ‘ಲ್ಯಾಂಡ್ಲಾಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.