ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ: ಕರ್ನಾಟಕ ಸಿಎಂ ಆಗ್ರಹವೇನು?

ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ: ಕರ್ನಾಟಕ ಸಿಎಂ ಆಗ್ರಹವೇನು?


ಪ್ರಧಾನಿ ಮೋದಿ ಮತ್ತು ಸಿದ್ದರಾಮಯ್ಯ ಸಿಎಂ

ಬೆಂಗಳೂರು, ಡಿಸೆಂಬರ್ 30: ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಸಿದ್ದರಾಮಯ್ಯ ಸಿಎಂ ಪತ್ರ ಬರೆದಿದ್ದಾರೆ. ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ. ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು ಶೇ. 90 ಮತ್ತು ಶೇ.10 ರಾಜ್ಯದ ಹಂಚಿಕೆಯಿತ್ತು. ಆದರೆ ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದೆ, 258, 250ನೇ ವಿಧಿಯ ಉಲ್ಲಂಘನೆಯಾಗಿದೆ.

ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಪ್ರಸ್ತುತ MGNREGA ಚೌಕಟ್ಟಿನಡಿ, ಪ್ರಮುಖ ರಾಜ್ಯಗಳಲ್ಲಿ ಕೇಂದ್ರ–ರಾಜ್ಯಗಳ ನಡುವೆ 90:10ರ ಅನುದಾನ ಹಂಚಿಕೆಯ ವ್ಯವಸ್ಥೆ ಇದೆ. ಹೊಸ ಕಾಯ್ದೆಯು ಇದನ್ನು ರಾಜ್ಯಗಳಿಗೆ 60:40ಕ್ಕೆ ಬದಲಾಯಿಸಲಾಗಿದೆ. ಇದು ಜಿಎಸ್ಟಿ ಪರಿಹಾರದ ಕೊರತೆ ಮತ್ತು ಅನ್ಯಾಯಕರ ಹಣಕಾಸು ವಿಂಗಡಣೆಯ ಕಾರಣದಿಂದ ಆರ್ಥಿಕ ಒತ್ತಡದಲ್ಲಿರುವ ರಾಜ್ಯಗಳ ಮೇಲೆ ಹೆಚ್ಚಿನ ಭಾರ ಹೇರುತ್ತಿದೆ. ಈ ಬದಲಾವಣೆಯನ್ನು ರಾಜ್ಯ ಸರ್ಕಾರದೊಂದಿಗೆ ಅರ್ಥಪೂರ್ಣ ಸಮಾಲೋಚನೆ ಇಲ್ಲದೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ‘ಜಿ ರಾಮ್ ಜಿ’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು

ಕೊಯ್ಲಿನ ಗರಿಷ್ಠ ಕಾಲಘಟ್ಟದಲ್ಲಿ ಒಟ್ಟು 60 ದಿನಗಳ ಕಾಲ ಈ ಕಾಯಿದೆಯಡಿ ಯಾವುದೇ ಕೆಲಸಗಳನ್ನು ಕೈಗೊಳ್ಳಬಾರದು ಎಂದು ರಾಜ್ಯಗಳಿಗೆ ಮುಂಚಿತವಾಗಿ ಅಧಿಸೂಚನೆ ಹೊರಡಿಸಲು ಹೊಸ ಕಾಯ್ದೆಯನ್ನು ಸೂಚಿಸಲಾಗಿದೆ. ಆ ಸಮಯದಲ್ಲಿ ಕೃಷಿ ಚಟುವಟಿಕೆ ಹೆಚ್ಚಾಗಬಹುದಾದರೂ ಇಂತಹ ಸಾಮಾನ್ಯ ನಿಷೇಧವು ಕೂಲಿ ಉದ್ಯೋಗಕ್ಕೆ ಅವಲಂಬಿತರಾಗಿರುವವರು, ವಿಶೇಷವಾಗಿ ಅತೀ ದುರ್ಬಲ ವರ್ಗಗಳಾದ ಆದಿವಾಸಿಗಳು ಮತ್ತು ಹಿಂದುಳಿದ ಸಮುದಾಯಗಳ ಹಕ್ಕನ್ನು ಕುಗ್ಗಿಸುತ್ತದೆ.

ಮುಖ್ಯವಾಗಿ, ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಆತುರವಾಗಿ ಜಾರಿಗೊಳಿಸಿರುವುದು ಸಂವಿಧಾನದ 258 ಮತ್ತು 280ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ವಿಧಿಗಳು, ಪ್ರಾಯೋಜಿತ ಯೋಜನೆಗಳ ಕೇಂದ್ರ ಹಣಕಾಸು ಚೌಕಟ್ಟುಗಳನ್ನು ಜಾರಿಗೊಳಿಸುವ ಮೊದಲು, ಹಣಕಾಸು ಸಂಸ್ಥೆ, ಸಮಾನ ಅಭಿವೃದ್ಧಿ ಮತ್ತು ಸ್ಥಳೀಯ ಆಡಳಿತದ ಬಲವರ್ಧನೆಗೆ ಒತ್ತು ನೀಡುತ್ತಾ ರಾಜ್ಯ ಸರ್ಕಾರವು ಈ ಸಮಾಲೋಚನೆ ನಡೆಸಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ. ಇಂತಹ ನಡೆ ಸಹಕಾರಿ ಮಾದರಿಯ ಮೂಲಾಧಾರವನ್ನು ದುರ್ಬಲಗೊಳಿಸುತ್ತದೆ.

ಉದ್ಯೋಗ ಭರವಸೆ ಕಾಯ್ದೆ ಕೇವಲ ಕಲ್ಯಾಣ ಯೋಜನೆಯಲ್ಲ; ಅದು ಮಹಾತ್ಮ ಗಾಂಧಿಯವರ ಹೆಸರನ್ನು ಹೊಂದಿರುವ, ಗ್ರಾಮ ಸ್ವರಾಜ್ಯ ಮತ್ತು ಅಂತ್ಯೋದಯದ ಮೌಲ್ಯಗಳನ್ನು ಪ್ರತಿಬಿಂಬಿಸುವ, ಐತಿಹಾಸಿಕ ಹಾಗೂ ಜಾಗತಿಕವಾಗಿ ಪ್ರಶಂಸಿತ ಹಕ್ಕು ಆಧಾರಿತ. ಈ ಕಾಯ್ದೆಯಿಂದ ಅವರ ಹೆಸರನ್ನು ತೆಗೆದುಹಾಕುವುದು ದೌರ್ಭಾಗ್ಯಕರ ಸಂದೇಶವನ್ನು ಮತ್ತು ಅದರ ನೈತಿಕ ಶಕ್ತಿಯನ್ನು ಕುಗ್ಗಿಸುತ್ತದೆ. ಈ ಸಹಕಾರಿ ಒಕ್ಕೂಟದ ನಾಶಕ್ಕೆ ಕಾರಣವಾಗಿರುವ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಸ್ಥಗಿತಗೊಳಿಸುವಂತೆ ಸಿದ್ದರಾಮಯ್ಯ ಇದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *