ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ: ಬಜೆಟ್​​​ನಲ್ಲಿ ಮಹತ್ವದ ನಿರ್ಧಾರ

ಮದ್ಯ ಪ್ರಿಯರಿಗೆ ಬಿಗ್​​ ಶಾಕ್​​ ನೀಡಿದ ಸಿದ್ದರಾಮಯ್ಯ: ಬಜೆಟ್​​​ನಲ್ಲಿ ಮಹತ್ವದ ನಿರ್ಧಾರ


ಬೆಂಗಳೂರು, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.6) ತಮ್ಮ 17ನೇ ಬಜೆಟ್‌ನಲ್ಲಿ ಅಬಕಾರಿ ಇಲಾಖೆ ಆದಾಯ ಸಂಗ್ರಹಿಸಲು ಹೊಸ ತಂತ್ರ ರೂಪಿಸಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ (ಆದಾಯ) ಸಂಗ್ರಹವನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ, ಎಕ್ಸ್-ಫ್ಯಾಕ್ಟರಿ (ಎಕ್ಸ್-ಫ್ಯಾಕ್ಟರಿ) ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕದಿದ್ದರೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತಹಂತವಾಗಿ ಸರ್ಕಾರ ಯೋಜನೆ ರೂಪಿಸಿದೆ.

ಇದನ್ನೂ ಓದಿ: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ ಮಾಡಿ ಸಿಎಂ ಘೋಷಣೆ

ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿತ್ತು (12.7% ಬೆಳವಣಿಗೆ). ಆದರೆ, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಸರ್ಕಾರ ಇಟ್ಟುಕೊಂಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *